ದೇಶ- ವಿದೇಶ

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ ನಡುವೆ ಹೆಚ್ಚುತ್ತಿರುವ ಬೆಂಬಲದ ನಡುವೆ ಸಿಜೆಪಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ಬಂಧಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಎಕ್ಸ್ ಖಾತೆ ನಿರ್ಬಂಧದ ಬೆನ್ನಲ್ಲೇ ಇನ್ಸ್ಟಾಗ್ರಾಂ ಅಕೌಂಟ್ ಕೂಡಾ ಹ್ಯಾಕ್ ಆಗಿದೆ ಎಂದು ಸಿಜೆಪಿ ಸ್ಥಾಪಕ ಅಭಿಜಿತ್ ದಿಪ್ಕೆ ಆರೋಪಿಸಿದ್ದಾರೆ.

ಸಿಜೆಪಿ ಸ್ಥಾಪಕ ಅಭಿಜಿತ್​ ದೀಪ್ಕೆ ಸಿಜೆಪಿ ಇನ್‌ಸ್ಟಾ ಖಾತೆ ಹ್ಯಾಕ್‌ ಆಗಿದೆ ಎಂದು ಆರೋಪ ಮಾಡಿದ್ದಾರೆ. ಕೆಲವು ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, ಇನ್‌ಸ್ಟಾಗ್ರಾಮ್ ಖಾತೆಯನ್ನು ಸುರಕ್ಷತೆಗಾಗಿ ಲಾಕ್ ಮಾಡಲಾಗಿದೆ, ಗುರುತು ಪರಿಶೀಲನೆ ಮಾಡಿ, ಪಾಸ್‌ವರ್ಡ್ ಬದಲಿಸಿದರೆ ಮಾತ್ರ ಮರುಸ್ಥಾಪಿಸಲಾಗುತ್ತದೆ ಎಂಬ ಸಂದೇಶ ಕಾಣುತ್ತದೆ. ಆದರೆ ಮರುಪಡೆಯುವಿಕೆ ಪ್ರಕ್ರಿಯೆ ಪದೇ ಪದೇ ವಿಫಲವಾಗುತ್ತಿದ್ದು, ಅವರು ಸಂಪೂರ್ಣವಾಗಿ ಖಾತೆಯಿಂದ ಹೊರಗುಳಿದಿರುವುದಾಗಿ ಹೇಳಿದ್ದಾರೆ.

ಮೆಟಾ ನೀಡಿರುವ ಖಾತೆ ಮರುಪಡೆಯುವ ವ್ಯವಸ್ಥೆಯ ಮೂಲಕ ಹಲವಾರು ಬಾರಿ ಪ್ರಯತ್ನಿಸಿದರೂ, ತಮ್ಮ ಖಾತೆಯನ್ನು ಮರಳಿ ಪಡೆಯಲು ಸಾಧ್ಯವಾಗಲಿಲ್ಲ ಎಂದು ಅಬಿಜಿತ್ ದಿಪ್ಕೆ ಹೇಳಿಕೊಂಡಿದ್ದಾರೆ. ಸದ್ಯ ಇದೀಗ ಮತ್ತೆ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಎಕ್ಸ್‌ನಲ್ಲಿ ಬ್ಯಾಕಪ್ ಖಾತೆಗೆ ನಿರ್ಬಂಧ
ಸಿಜೆಪಿ ಪಕ್ಷದ ಬ್ಯಾಕಪ್ ಇನ್‌ಸ್ಟಾಗ್ರಾಮ್ ಖಾತೆಯನ್ನೂ ಕೆಲಕಾಲ ಸಂಪೂರ್ಣವಾಗಿ ತೆಗೆದುಹಾಕಲಾಗಿತ್ತು. ನಂತರ ಗಂಟೆಗಳ ಬಳಿಕ ಅದನ್ನು ಪುನಃಸ್ಥಾಪಿಸಲಾಯಿತು ಎಂದು ದೀಪ್ಕೆ ಆರೋಪಿಸಿದ್ದಾರೆ. ಅವರು ಮಾಡಿದ ಪೋಸ್ಟ್‌ಗಳಲ್ಲಿ, ಸಾಮಾಜಿಕ ಮಾಧ್ಯಮ ಕಂಪನಿಗಳು ಈ ಚಳವಳಿಗೆ ಸಂಬಂಧಿಸಿದ ಖಾತೆಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಕಿಡಿಕಾರಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ಮೇಲೆ ಕ್ರ್ಯಾಕ್‌ಡೌನ್ ನಡೆಯುತ್ತಿದೆ. ನಮ್ಮ ಇನ್‌ಸ್ಟಾಗ್ರಾಮ್ ಪುಟ, ನನ್ನ ವೈಯಕ್ತಿಕ ಇನ್‌ಸ್ಟಾಗ್ರಾಮ್, ಟ್ವಿಟರ್ ಖಾತೆ, ಬ್ಯಾಕಪ್ ಖಾತೆ ಎಲ್ಲವನ್ನೂ ಹ್ಯಾಕ್ ಅಥವಾ ತಡೆಹಿಡಿಯಲಾಗಿದೆ ಎಂದು ಹೇಳಿದ್ದಾರೆ.

ಅಬಿಜಿತ್ ದಿಪ್ಕೆ ಫಾರ್ಲೋವರ್ಸ್‌ಗೆ ಮನವಿ
ತಮ್ಮ ಪಕ್ಷಕ್ಕೆ ಡಿಜಿಟಲ್ ವೇದಿಕೆಗಳಲ್ಲಿ ಪ್ರವೇಶ ನಿರ್ಬಂಧಿಸಲಾಗುತ್ತಿದೆ ಎಂದು ಆರೋಪಿಸಿರುವ ಅಬಿಜಿತ್ ದಿಪ್ಕೆ ದಯವಿಟ್ಟು ಗಮನಿಸಿ, ಸದ್ಯ ನಮಗೆ ಎಲ್ಲ ವೇದಿಕೆಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ, ಇನ್ಮುಂದೆ ಪ್ರಕಟವಾಗುವ ಯಾವುದೇ ಪೋಸ್ಟ್ ಕಾಕ್ರೋಚ್ ಜನತಾ ಪಕ್ಷದ ಅಧಿಕೃತ ಹೇಳಿಕೆ ಎಂದು ಪರಿಗಣಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

21 mins ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

1 hour ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

5 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago