ದೇಶ- ವಿದೇಶ

ಭಾರತಕ್ಕೆ ಬಂದು ಇವಿಎಂ ಹ್ಯಾಕ್‌ ಬಗ್ಗೆ ತಿಳಿಸಿಕೊಡಿ: ಎಲಾನ್‌ ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ನವದೆಹಲಿ: ವಿದ್ಮುನ್ಮಾನ ಮತಯಂತ್ರಗಳ(ಇವಿಎಂ) ಪರ ವಿರೋಧ ಚರ್ಚೆಗಳು ಮತ್ತೆ ಶುರುವಾಗಿದೆ. ಇವಿಎಂ ನಿಷೇಧದ ಬಗ್ಗೆ ಅಮೆರಿಕಾದ ಎಲಾನ್‌ ಮಸ್ಕ್ ಬಿಟ್ಟ ಬಾಣ ಭಾರತಕ್ಕೆ ತಿರುಗಿದೆ. ಇವಿಎಂ ಬಗ್ಗೆ ಅಪಸ್ವರ ಎತ್ತಿರುವ ಎಲೆನ್ ಮಸ್ಕ್‌, ಇವಿಎಂ ಹ್ಯಾಕ್‌ ಆಗುವ ಸಾಧ್ಯೆತೆಯಿದ್ದು, ಇವಿಎಂ ಬಳಕೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ಸದ್ಯ ಈ ವಿಚಾರವಾಗಿ ಭಾರತ ಚುನಾವಣಾ ಆಯೋಗವು ಎಲಾನ್‌ ಮಸ್ಕ್‌ಗೆ ಸವಾಲೊಂದನ್ನು ಹಾಕಿದೆ.

ಎಲಾನ್‌ ಮಸ್ಕ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ಆಯೋಗ, ಈ ಹೇಳಿಕೆ ಅಸಂಬದ್ಧ ಊಹಾಪೋಹವಾಗಿದೆ. ಭಾರತೀಯ ಚುನಾವಣೆಗಳ ವಿಶ್ವಾಸಾರ್ಹತೆಯನ್ನು ಕೆಡಿಸುವ ಪ್ರಯತ್ನ ಇದಾಗಿದೆ ಎಂದು ಕಿಡಿಕಾರಿದ್ದು, ಎಲಾನ್‌ ಮಸ್ಕ್‌ ಅವರೇ ಭಾರತಕ್ಕೆ ಬಂದು ಇವಿಎಂಗಳ ಹ್ಯಾಕಿಂಗ್‌ ಅನ್ನು ಪ್ರದರ್ಶಿಸಲು ನಾವು ನಿಮಗೆ ಸವಾಲು ಹಾಕುತ್ತೇವೆ ಎಂದು ಹೇಳಿದೆ.

ಎಲಾನ್‌ ಮಸ್ಕ್‌ ಹೊತ್ತಿಸಿದ್ದ ಇವಿಎಂ ನಿಷೇಧದ ಕಿಚ್ಚು, ಸದ್ಯ ದೇಶಾದ್ಯಾಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಸ್ಕ್‌ ಅವರ ಹೇಳಿಕೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡ ಭಾರತದ ಇವಿಎಂಗಳು ಬ್ಲಾಕ್‌ ಬಾಕ್ಸ್‌ ಎಂದು ವ್ಯಾಖ್ಯಾನಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

18 mins ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

26 mins ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

2 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

3 hours ago