ನವದೆಹಲಿ: ವಿದ್ಮುನ್ಮಾನ ಮತಯಂತ್ರಗಳ(ಇವಿಎಂ) ಪರ ವಿರೋಧ ಚರ್ಚೆಗಳು ಮತ್ತೆ ಶುರುವಾಗಿದೆ. ಇವಿಎಂ ನಿಷೇಧದ ಬಗ್ಗೆ ಅಮೆರಿಕಾದ ಎಲಾನ್ ಮಸ್ಕ್ ಬಿಟ್ಟ ಬಾಣ ಭಾರತಕ್ಕೆ ತಿರುಗಿದೆ. ಇವಿಎಂ ಬಗ್ಗೆ ಅಪಸ್ವರ ಎತ್ತಿರುವ ಎಲೆನ್ ಮಸ್ಕ್, ಇವಿಎಂ ಹ್ಯಾಕ್ ಆಗುವ ಸಾಧ್ಯೆತೆಯಿದ್ದು, ಇವಿಎಂ ಬಳಕೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ಸದ್ಯ ಈ ವಿಚಾರವಾಗಿ ಭಾರತ ಚುನಾವಣಾ ಆಯೋಗವು ಎಲಾನ್ ಮಸ್ಕ್ಗೆ ಸವಾಲೊಂದನ್ನು ಹಾಕಿದೆ.
ಎಲಾನ್ ಮಸ್ಕ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ಆಯೋಗ, ಈ ಹೇಳಿಕೆ ಅಸಂಬದ್ಧ ಊಹಾಪೋಹವಾಗಿದೆ. ಭಾರತೀಯ ಚುನಾವಣೆಗಳ ವಿಶ್ವಾಸಾರ್ಹತೆಯನ್ನು ಕೆಡಿಸುವ ಪ್ರಯತ್ನ ಇದಾಗಿದೆ ಎಂದು ಕಿಡಿಕಾರಿದ್ದು, ಎಲಾನ್ ಮಸ್ಕ್ ಅವರೇ ಭಾರತಕ್ಕೆ ಬಂದು ಇವಿಎಂಗಳ ಹ್ಯಾಕಿಂಗ್ ಅನ್ನು ಪ್ರದರ್ಶಿಸಲು ನಾವು ನಿಮಗೆ ಸವಾಲು ಹಾಕುತ್ತೇವೆ ಎಂದು ಹೇಳಿದೆ.
ಎಲಾನ್ ಮಸ್ಕ್ ಹೊತ್ತಿಸಿದ್ದ ಇವಿಎಂ ನಿಷೇಧದ ಕಿಚ್ಚು, ಸದ್ಯ ದೇಶಾದ್ಯಾಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಸ್ಕ್ ಅವರ ಹೇಳಿಕೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭಾರತದ ಇವಿಎಂಗಳು ಬ್ಲಾಕ್ ಬಾಕ್ಸ್ ಎಂದು ವ್ಯಾಖ್ಯಾನಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…