ದೇಶ- ವಿದೇಶ

ಭಾರತಕ್ಕೆ ಬಂದು ಇವಿಎಂ ಹ್ಯಾಕ್‌ ಬಗ್ಗೆ ತಿಳಿಸಿಕೊಡಿ: ಎಲಾನ್‌ ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ನವದೆಹಲಿ: ವಿದ್ಮುನ್ಮಾನ ಮತಯಂತ್ರಗಳ(ಇವಿಎಂ) ಪರ ವಿರೋಧ ಚರ್ಚೆಗಳು ಮತ್ತೆ ಶುರುವಾಗಿದೆ. ಇವಿಎಂ ನಿಷೇಧದ ಬಗ್ಗೆ ಅಮೆರಿಕಾದ ಎಲಾನ್‌ ಮಸ್ಕ್ ಬಿಟ್ಟ ಬಾಣ ಭಾರತಕ್ಕೆ ತಿರುಗಿದೆ. ಇವಿಎಂ ಬಗ್ಗೆ ಅಪಸ್ವರ ಎತ್ತಿರುವ ಎಲೆನ್ ಮಸ್ಕ್‌, ಇವಿಎಂ ಹ್ಯಾಕ್‌ ಆಗುವ ಸಾಧ್ಯೆತೆಯಿದ್ದು, ಇವಿಎಂ ಬಳಕೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ಸದ್ಯ ಈ ವಿಚಾರವಾಗಿ ಭಾರತ ಚುನಾವಣಾ ಆಯೋಗವು ಎಲಾನ್‌ ಮಸ್ಕ್‌ಗೆ ಸವಾಲೊಂದನ್ನು ಹಾಕಿದೆ.

ಎಲಾನ್‌ ಮಸ್ಕ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ಆಯೋಗ, ಈ ಹೇಳಿಕೆ ಅಸಂಬದ್ಧ ಊಹಾಪೋಹವಾಗಿದೆ. ಭಾರತೀಯ ಚುನಾವಣೆಗಳ ವಿಶ್ವಾಸಾರ್ಹತೆಯನ್ನು ಕೆಡಿಸುವ ಪ್ರಯತ್ನ ಇದಾಗಿದೆ ಎಂದು ಕಿಡಿಕಾರಿದ್ದು, ಎಲಾನ್‌ ಮಸ್ಕ್‌ ಅವರೇ ಭಾರತಕ್ಕೆ ಬಂದು ಇವಿಎಂಗಳ ಹ್ಯಾಕಿಂಗ್‌ ಅನ್ನು ಪ್ರದರ್ಶಿಸಲು ನಾವು ನಿಮಗೆ ಸವಾಲು ಹಾಕುತ್ತೇವೆ ಎಂದು ಹೇಳಿದೆ.

ಎಲಾನ್‌ ಮಸ್ಕ್‌ ಹೊತ್ತಿಸಿದ್ದ ಇವಿಎಂ ನಿಷೇಧದ ಕಿಚ್ಚು, ಸದ್ಯ ದೇಶಾದ್ಯಾಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಸ್ಕ್‌ ಅವರ ಹೇಳಿಕೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡ ಭಾರತದ ಇವಿಎಂಗಳು ಬ್ಲಾಕ್‌ ಬಾಕ್ಸ್‌ ಎಂದು ವ್ಯಾಖ್ಯಾನಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

15 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

21 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

27 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago