ಅಯೋಧ್ಯೆ: ರಾಮಮಂದಿರದಲ್ಲಿ ಭದ್ರತೆಗೆಂದು ನಿಯೋಜಿಸಲಾಗಿದ್ದ ಕಮಾಂಡರ್ ಒಬ್ಬರು ಗನ್ ಅನ್ನು ಸ್ವಚ್ಛಗೊಳಿಸುವಾಗ ಗುಂಡು ಹಾರಿಸಿಕೊಂಡಿರುವ ಘಟನೆ ನಿನ್ನೆ ( ಮಾರ್ಚ್ 26 ) ಸಂಜೆ 5.45ಕ್ಕೆ ನಡೆದಿದೆ.
ಮೂಲತಃ ಅಮೇಥಿಯ ರಾಮ್ಪ್ರಸಾದ್ (53) ಗನ್ ಸ್ವಚ್ಛಗೊಳಿಸುತ್ತಿರಬೇಕಾದರೆ ತಿಳಿಯದೇ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಶ್ರೀರಾಮ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ನೋದ ವೈದ್ಯಕೀಯ ಕಾಲೇಜಿಗೆ ಕಳುಹಿಸಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಶ್ರೀರಾಮಮಂದಿರ ಭದ್ರತೆಯಲ್ಲಿ ಪಿಎಸಿಯ 32ನೇ ಬೆಟಾಲಿಯನ್ನ ಪ್ಲಟೂನ್ ಕಮಾಂಡರ್ ಆಗಿ ರಾಮ್ಪ್ರಸಾದ್ ನಿಯೋಜಿಸಲ್ಪಟ್ಟಿದ್ದರು. ಇನ್ನು ಗನ್ನಿಂದ ಸಿಡಿದ ಗುಂಡು ನೇರವಾಗಿ ರಾಮ್ಪ್ರಸಾದ್ ಎಡ ಎದೆಗೆ ಬಡಿದು ಹಾದುಹೋಗಿದೆ. ಹೀಗೆ ಗಂಭೀರವಾಗಿ ಗಾಯಗೊಂಡ ರಾಮ್ಪ್ರಸಾದ್ ಸ್ಥಳದಲ್ಲೇ ಕುಸಿದುಬಿದ್ದಿದ್ದರು. ಇನ್ನು ಮಂದಿರದ ಹೈಸೆಕ್ಯೂರಿಟಿ ವಲಯದಲ್ಲಿ ಏಕಾಏಕಿ ಗುಂಡಿನ ಶಬ್ದ ಕೇಳಿಬಂದದ್ದರಿಂದ ಕೆಲಕಾಲ ಕೋಲಾಹಲ ಉಂಟಾಯಿತು.
ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ…
ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ…
ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…
ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…