ಅಯೋಧ್ಯೆ: ರಾಮಮಂದಿರದಲ್ಲಿ ಭದ್ರತೆಗೆಂದು ನಿಯೋಜಿಸಲಾಗಿದ್ದ ಕಮಾಂಡರ್ ಒಬ್ಬರು ಗನ್ ಅನ್ನು ಸ್ವಚ್ಛಗೊಳಿಸುವಾಗ ಗುಂಡು ಹಾರಿಸಿಕೊಂಡಿರುವ ಘಟನೆ ನಿನ್ನೆ ( ಮಾರ್ಚ್ 26 ) ಸಂಜೆ 5.45ಕ್ಕೆ ನಡೆದಿದೆ.
ಮೂಲತಃ ಅಮೇಥಿಯ ರಾಮ್ಪ್ರಸಾದ್ (53) ಗನ್ ಸ್ವಚ್ಛಗೊಳಿಸುತ್ತಿರಬೇಕಾದರೆ ತಿಳಿಯದೇ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಶ್ರೀರಾಮ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ನೋದ ವೈದ್ಯಕೀಯ ಕಾಲೇಜಿಗೆ ಕಳುಹಿಸಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಶ್ರೀರಾಮಮಂದಿರ ಭದ್ರತೆಯಲ್ಲಿ ಪಿಎಸಿಯ 32ನೇ ಬೆಟಾಲಿಯನ್ನ ಪ್ಲಟೂನ್ ಕಮಾಂಡರ್ ಆಗಿ ರಾಮ್ಪ್ರಸಾದ್ ನಿಯೋಜಿಸಲ್ಪಟ್ಟಿದ್ದರು. ಇನ್ನು ಗನ್ನಿಂದ ಸಿಡಿದ ಗುಂಡು ನೇರವಾಗಿ ರಾಮ್ಪ್ರಸಾದ್ ಎಡ ಎದೆಗೆ ಬಡಿದು ಹಾದುಹೋಗಿದೆ. ಹೀಗೆ ಗಂಭೀರವಾಗಿ ಗಾಯಗೊಂಡ ರಾಮ್ಪ್ರಸಾದ್ ಸ್ಥಳದಲ್ಲೇ ಕುಸಿದುಬಿದ್ದಿದ್ದರು. ಇನ್ನು ಮಂದಿರದ ಹೈಸೆಕ್ಯೂರಿಟಿ ವಲಯದಲ್ಲಿ ಏಕಾಏಕಿ ಗುಂಡಿನ ಶಬ್ದ ಕೇಳಿಬಂದದ್ದರಿಂದ ಕೆಲಕಾಲ ಕೋಲಾಹಲ ಉಂಟಾಯಿತು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…