ಅಯೋಧ್ಯೆ: ರಾಮಮಂದಿರದಲ್ಲಿ ಭದ್ರತೆಗೆಂದು ನಿಯೋಜಿಸಲಾಗಿದ್ದ ಕಮಾಂಡರ್ ಒಬ್ಬರು ಗನ್ ಅನ್ನು ಸ್ವಚ್ಛಗೊಳಿಸುವಾಗ ಗುಂಡು ಹಾರಿಸಿಕೊಂಡಿರುವ ಘಟನೆ ನಿನ್ನೆ ( ಮಾರ್ಚ್ 26 ) ಸಂಜೆ 5.45ಕ್ಕೆ ನಡೆದಿದೆ.
ಮೂಲತಃ ಅಮೇಥಿಯ ರಾಮ್ಪ್ರಸಾದ್ (53) ಗನ್ ಸ್ವಚ್ಛಗೊಳಿಸುತ್ತಿರಬೇಕಾದರೆ ತಿಳಿಯದೇ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಶ್ರೀರಾಮ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ನೋದ ವೈದ್ಯಕೀಯ ಕಾಲೇಜಿಗೆ ಕಳುಹಿಸಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಶ್ರೀರಾಮಮಂದಿರ ಭದ್ರತೆಯಲ್ಲಿ ಪಿಎಸಿಯ 32ನೇ ಬೆಟಾಲಿಯನ್ನ ಪ್ಲಟೂನ್ ಕಮಾಂಡರ್ ಆಗಿ ರಾಮ್ಪ್ರಸಾದ್ ನಿಯೋಜಿಸಲ್ಪಟ್ಟಿದ್ದರು. ಇನ್ನು ಗನ್ನಿಂದ ಸಿಡಿದ ಗುಂಡು ನೇರವಾಗಿ ರಾಮ್ಪ್ರಸಾದ್ ಎಡ ಎದೆಗೆ ಬಡಿದು ಹಾದುಹೋಗಿದೆ. ಹೀಗೆ ಗಂಭೀರವಾಗಿ ಗಾಯಗೊಂಡ ರಾಮ್ಪ್ರಸಾದ್ ಸ್ಥಳದಲ್ಲೇ ಕುಸಿದುಬಿದ್ದಿದ್ದರು. ಇನ್ನು ಮಂದಿರದ ಹೈಸೆಕ್ಯೂರಿಟಿ ವಲಯದಲ್ಲಿ ಏಕಾಏಕಿ ಗುಂಡಿನ ಶಬ್ದ ಕೇಳಿಬಂದದ್ದರಿಂದ ಕೆಲಕಾಲ ಕೋಲಾಹಲ ಉಂಟಾಯಿತು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…