ಅಯೋಧ್ಯೆ: ರಾಮಮಂದಿರದಲ್ಲಿ ಭದ್ರತೆಗೆಂದು ನಿಯೋಜಿಸಲಾಗಿದ್ದ ಕಮಾಂಡರ್ ಒಬ್ಬರು ಗನ್ ಅನ್ನು ಸ್ವಚ್ಛಗೊಳಿಸುವಾಗ ಗುಂಡು ಹಾರಿಸಿಕೊಂಡಿರುವ ಘಟನೆ ನಿನ್ನೆ ( ಮಾರ್ಚ್ 26 ) ಸಂಜೆ 5.45ಕ್ಕೆ ನಡೆದಿದೆ.
ಮೂಲತಃ ಅಮೇಥಿಯ ರಾಮ್ಪ್ರಸಾದ್ (53) ಗನ್ ಸ್ವಚ್ಛಗೊಳಿಸುತ್ತಿರಬೇಕಾದರೆ ತಿಳಿಯದೇ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಶ್ರೀರಾಮ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ನೋದ ವೈದ್ಯಕೀಯ ಕಾಲೇಜಿಗೆ ಕಳುಹಿಸಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಶ್ರೀರಾಮಮಂದಿರ ಭದ್ರತೆಯಲ್ಲಿ ಪಿಎಸಿಯ 32ನೇ ಬೆಟಾಲಿಯನ್ನ ಪ್ಲಟೂನ್ ಕಮಾಂಡರ್ ಆಗಿ ರಾಮ್ಪ್ರಸಾದ್ ನಿಯೋಜಿಸಲ್ಪಟ್ಟಿದ್ದರು. ಇನ್ನು ಗನ್ನಿಂದ ಸಿಡಿದ ಗುಂಡು ನೇರವಾಗಿ ರಾಮ್ಪ್ರಸಾದ್ ಎಡ ಎದೆಗೆ ಬಡಿದು ಹಾದುಹೋಗಿದೆ. ಹೀಗೆ ಗಂಭೀರವಾಗಿ ಗಾಯಗೊಂಡ ರಾಮ್ಪ್ರಸಾದ್ ಸ್ಥಳದಲ್ಲೇ ಕುಸಿದುಬಿದ್ದಿದ್ದರು. ಇನ್ನು ಮಂದಿರದ ಹೈಸೆಕ್ಯೂರಿಟಿ ವಲಯದಲ್ಲಿ ಏಕಾಏಕಿ ಗುಂಡಿನ ಶಬ್ದ ಕೇಳಿಬಂದದ್ದರಿಂದ ಕೆಲಕಾಲ ಕೋಲಾಹಲ ಉಂಟಾಯಿತು.
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…