ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ ನಿಗದಿ ಮಾಡಿದೆ.
234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಇದೇ ವರ್ಷ ಏಪ್ರಿಲ್-ಮೇ ಅವಧಿಯಲ್ಲಿ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ, ವಿಸಿಲ್ (ಸೀಟಿ) ಚಿಹ್ನೆಯನ್ನು ಟಿವಿಕೆಗೆ ನೀಡಲಾಗಿದೆ.
ಕಮಲ್ ಹಾಸನ್ ಅವರ ಮಕ್ಕಳ ನಿಧಿ ಮಯಂ (ಎಂಎನ್ಎಂ) ಪಕ್ಷಕ್ಕೆ ‘ಟಾರ್ಚ್’ ಚಿಹ್ನೆ ನೀಡಲಾಗಿದೆ. ಈ ಸಂಬಂಧ ಚುನಾವಣಾ ಆಯೋಗವು ಹೇಳಿಕೆ ಬಿಡುಗಡೆ ಮಾಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಎರಡು ಸುತ್ತಿನ ವಿಚಾರಣೆ
ಕರೂರು ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಟಿವಿಕೆ ಮುಖ್ಯಸ್ಥ ವಿಜಯ್ ಅವರನ್ನು ಸಿಬಿಐ ಎರಡು ಸುತ್ತಿನ ವಿಚಾರಣೆಗೆ ಒಳಪಡಿಸಿದೆ. 2025ರ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಆಯೋಜನೆಗೊಂಡಿದ್ದ ಟಿವಿಕೆ ಸಮಾವೇಶದ ವೇಳೆ ಕಾಲ್ತುಳಿತ ಸಂಭವಿಸಿ, 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…