ದೇಶ- ವಿದೇಶ

ವೇಗವರ್ಧಿತ ಎಲೆಕ್ಟ್ರಿಕ್ ವಾಹನ (ಇವಿ) ಪರಿವರ್ತನೆಗೆ ಬದ್ಧ : ಕೇಂದ್ರ ಸಚಿವ ಕುಮಾರಸ್ವಾಮಿ

ಹೊಸದಿಲ್ಲಿ : ರಾಷ್ಟ್ರದ ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಸಿ ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚು ಉತ್ತೇಜಿಸುವ ನೀತಿ ಕುರಿತಂತೆ ಚರ್ಚಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇವಿ ಕ್ಷೇತ್ರದ ಖಾಸಗಿ ಪಾಲುದಾರರು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.

ಭಾರತದಲ್ಲಿ ಸ್ವಚ್ಛ, ಮಾಲಿನ್ಯರಹಿತ ಚಲನಶೀಲತೆಯ ಪರಿವರ್ತನೆಯನ್ನು ವೇಗಗೊಳಿಸುವುದು ಮತ್ತು ವಿದ್ಯುತ್ ಚಾಲಿತ ವಾಹನ (ಇವಿ) ಅಳವಡಿಕೆಯನ್ನು ಹೆಚ್ಚಿಸುವ ಬಗ್ಗೆ ಭಾರತದ ಆಟೋಮೋಟಿವ್ ವಲಯದ ಪ್ರಮುಖರು ಸಚಿವಾಲಯದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ವಿದ್ಯುತ್ ಚಾಲಿತ ವಾಹನ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಶಕ್ತಿ ತುಂಬವುದು. ಇಂಥ ವಾಹನಗಳನ್ನು ಹೆಚ್ಚು ಬಳಕೆ ಮಾಡುವುದು, ಮಾಲಿನ್ಯಮುಕ್ತ ಪ್ರಚಾರಕ್ಕಾಗಿ ವ್ಯೂಹಾತ್ಮಕ ಕಾರ್ಯತಂತ್ರಗಳು ಹಾಗೂ ಸ್ಥಳೀಯ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸುವ ಮಾರ್ಗೋಪಾಯಗಳ ಕುರಿತು ಸಚಿವರು ಉದ್ಯಮ ಪ್ರತಿನಿಧಿಗಳು ಸಚಿವರ ಗಮನ ಸೆಳೆದರು.

ಸ್ವಚ್ಛ ಚಲನಶೀಲತೆ ಇವತ್ತಿನ ತುರ್ತು ಅಗತ್ಯ. ನಗರ ಪ್ರದೇಶಗಳಲ್ಲಿ ಮೂಲಸೌಕರ್ಯವನ್ನು ಎಲೆಕ್ಟ್ರಿಕ್‌ ವಾಹನ ಕ್ಷೇತ್ರಕ್ಕೆ ಅನುಗುಣವಾಗಿ ಪರಿವರ್ತಿಸುವುದು ಮತ್ತು ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕ್ಷಿಪ್ರಗತಿಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. 5 ಟ್ರಿಲಿಯನ್ ಡಾಲರ್‌ ಆರ್ಥಿಕತೆಯ ಗುರಿಯನ್ನು ಮುಟ್ಟಲು ಆಟೋಮೊಬೈಲ್‌ ಕ್ಷೇತ್ರವನ್ನು ಮಾಲಿನ್ಯಮುಕ್ತ, ಸ್ವಾವಲಂಭಿ ಕ್ಷೇತ್ರವನ್ನಾಗಿ ರೂಪಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸು. ಈ ನಿಟ್ಟಿನಲ್ಲಿ ಉದ್ಯಮದ ಖಾಸಗಿ ಪಾಲುದಾರರು ನಿರ್ಣಾಯಕ ಹೆಜ್ಜೆಗಳನ್ನು ಇಡಬೇಕಾಗುತ್ತದೆ ಎಂಬ ಅಂಶವನ್ನು ಸಚಿವ ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಇಂಗಾಲದ ಶೂನ್ಯ ಹೊರಸೂಸುವಿಕೆ ಗುರಿ ಸಾಧಿಸುವ ಹಿನ್ನೆಲೆಯಲ್ಲಿ ʼಮೇಕ್ ಇನ್ ಇಂಡಿಯಾʼ ಮತ್ತು ʼಆತ್ಮನಿರ್ಭರ ಭಾರತ್‌ʼ ಕಾರ್ಯಕ್ರಮಗಳ ಅಡಿಯಲ್ಲಿ ವೇಗವಾಗಿ ಕೆಲಸ ಮಾಡುವ ಬದ್ಧತೆಯನ್ನು ಬೃಹತ್ ಕೈಗಾರಿಕೆ ಸಚಿವಾಲಯ ಹೊಂದಿದೆ ಎಂದು ತಿಳಿಸಿದ ಸಚಿವರು; ಜಾಗತಿಕ ಸ್ಪರ್ಧಾತ್ಮಕತೆಗೆ ತಕ್ಕಂತೆ ಸ್ಥಳೀಯ ಇವಿ ಕ್ಷೇತ್ರದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿದ್ಯುತ್ ಚಾಲಿತ ವಾಹನ ತಯಾರಿಕೆಗೆ ಅನುಕೂಲವಾಗುವ ಪೂರಕ ವ್ಯವಸ್ಥೆಯನ್ನು ಒದಗಿಸುವ ದಿಕ್ಕಿನಲ್ಲಿಯೇ ಕೇಂದ್ರವು ತನ್ನೆಲ್ಲಾ ನೀತಿಗಳನ್ನು ರೂಪಿಸಿದೆ ಎಂದರು.

ಇದೇ ವೇಳೆ FAME I & II, ಆಟೋ PLI, ACC PLI, ಮತ್ತು PM E-ಡ್ರೈವ್‌ನಂತಹ ಯೋಜನೆಗಳ ಅಡಿಯಲ್ಲಿ ಸಾಧಿಸಲಾದ ಪ್ರಗತಿಯನ್ನು ಖಾಸಗಿ ಪಾಲುದಾರರು ಶ್ಲಾಘಿಸಿದರು. ಈ ಉಪಕ್ರಮಗಳು ಭಾರತವು ಜಾಗತಿಕ ಮಟ್ಟದ ವಿದ್ಯುತ್ ಚಾಲಿತ ವಾಹನ ಉತ್ಪಾದನೆ ಮತ್ತು ನಾವೀನ್ಯತಾ ಕೇಂದ್ರವಾಗಿ ಹೊರಹೊಮ್ಮಲು ಬಲವಾದ ಅಡಿಪಾಯವನ್ನು ಹಾಕಿವೆ ಎಂದು ಅಭಿಪ್ರಾಯಪಟ್ಟರು.

ಅಲ್ಲದೆ, ಖಾಸಗಿ ಪಾಲುದಾರರ ಸಲಹೆಗಳನ್ನು ಆಲಿಸಿದ ಸಚಿವರು, ಅವುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

3 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

3 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

4 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

13 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago