ಕಾಮನ್ವೆಲ್ತ್ ಗೇಮ್ಸ್ನಲ್ಲಿ ದಿವ್ಯ ಪಡೆದ ಎರಡನೇ ಪದಕವಾಗಿದೆ. 2018ರ ಕ್ರೀಡಾಕೂಟದಲ್ಲೂ ದಿವ್ಯ ಪದಕ ಸಾಧನೆ ಮಾಡಿದ್ದರು. ಈ ಬಾರಿ ಪದಕ ಗೆದ್ದ ಬೆನ್ನಲ್ಲೇ ಸಿಎಂ ಅರವಿಂದ್ ಕೇಜ್ರಿವಾಲ್ ಅಭಿನಂದನೆ ಸಲ್ಲಿಸಿದ್ದರು. ಇದುವರೆಗೂ ಯಾವ ರೀತಿಯ ನೆರವು ನೀಡಿದ ಆಮ್ ಆದ್ಮಿ ಸರ್ಕಾರ ಇದೀಗ ಪದಕ ಗೆದ್ದಾಗ ಕ್ರೆಡಿಟ್ ಪಡೆಯುವ ಲೆಕ್ಕಾಚಾರದಲ್ಲಿತ್ತು. ಈ ಅಭಿನಂದನೆಗೆ ಪ್ರತಿಕ್ರಿಯೆ ನೀಡಿದ ದಿವ್ಯ ಕಾಕ್ರನ್, ತಾನು 20 ವರ್ಷಗಳಿಂದ ದೆಹಲಿಯಲ್ಲಿದ್ದೇನೆ. ಅಭ್ಯಾಸ, ತರಬೇತಿ ಎಲ್ಲವೂ ದೆಹಲಿಯಲ್ಲೇ ಪಡೆದಿದ್ದೇನೆ. ಆದರೆ ಇದುವರೆಗೂ ಯಾವುದೇ ನೆರವು ಸಿಕ್ಕಿಲ್ಲ. ನಗದು ಬಹುಮಾನ ಸೇರಿದಂತೆ ಯಾವ ನೆರವೂ ಆಪ್ ಸರ್ಕಾರ ನೀಡಿಲ್ಲ ಎಂದು ದಿವ್ಯ ಕಾಕ್ರನ್ ಬೇಸರ ವ್ಯಕ್ತಪಡಿಸಿದ್ದರು.
2018ರ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ದಿವ್ಯ ಕಾಕ್ರನ್ಗೆ ಆಪ್ ಸರ್ಕಾರ ಯಾವುದೇ ಬಹಮಾನ, ನಗದು, ಆರ್ಥಿಕ ನೆರವು ನೀಡಿಲ್ಲ. ಇಷ್ಟೇ ಅಲ್ಲ ಇದುವರೆಗೂ ಯಾವ ನೆರವನ್ನೂ ನೀಡಿಲ್ಲ. ಇದೀಗ ಪದಕ ಗೆದ್ದಾಗ ಅದರ ಶ್ರೇಯಸ್ಸು ಪಡೆಯಲು ಬಂದ ಆಪ್ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಸರಿಯಾಗಿ ತಿರುಗೇಟು ನೀಡಿದ್ದರು. ದಿವ್ಯ ಕಾಕ್ರನ್ ಟ್ವೀಟ್, ಆಪ್ ಶಾಸಕ ಸೌರಬ್ ಭಾರದ್ವಾಜ್ ಕೆರಳಿಸಿತ್ತು. ದಿವ್ಯ ಕಾಕ್ರನ್ ದೆಹಲಿ ಪರ ಆಡಿಲ್ಲ. ಹೀಗಾಗಿ ದೆಹಲಿ ಸರ್ಕಾರ ನೆರವು ನೀಡುವ ಅಗತ್ಯವೆಲ್ಲಿದೆ. ಯೋಗಿ ಆದಿತ್ಯನಾಥ್ ನಿಮಗೆ ಯಾವುದೇ ನೆರವು ನೀಡಿಲ್ಲವೇ ಎಂದು ಅರವಿಂದ್ ಕೇಜ್ರಿವಾಲ್ ಪರ ಬ್ಯಾಟ್ ಬೀಸಿದ್ದರು. ಆದರೆ ಈ ನಿಲುವು ಹಾಗೂ ಪ್ರಶ್ನೆ ಆಪ್ಗೆ ತಿರುಗುಬಾಣವಾಗಿದೆ.
2011 ರಿಂದ 2017ರ ವರೆಗೆ ದೆಹಲಿ ಪರ ಆಡಿದ ಪ್ರಮಾಣ ಪತ್ರ ಇಲ್ಲಿದೆ. ಇನ್ನೂ ನಿಮಗೆ ನಂಬಲು ಸಾಧ್ಯವಾಗುತ್ತಿಲ್ಲ ಅಂದರೆ ದೆಹಲಿ ಪ್ರತಿನಿದಿಸಿ17 ಚಿನ್ನದ ಪದಕ ಗೆದ್ದಿದ್ದೇನೆ. ಅದರ ಪ್ರಮಾಣ ಪತ್ರಗಳನ್ನು ಪೋಸ್ಟ್ ಮಾಡಬೇಕಾ ಎಂದು ದಿವ್ಯ ಖಾರವಾಗಿ ಪ್ರಶ್ನಿಸಿದ್ದಾರೆ. ಅಷ್ಟರಲ್ಲೇ ಆಪ್ ಮಾನ ಬೀದಿಗೆ ಬಂದಿದೆ. ದೇಶಕ್ಕೆ ಕಂಚಿನ ಪದಕ ತಂದುಕೊಟ್ಟ ಪ್ರತಿಭೆಗೆ ಯಾವುದೇ ನೆರವು ನೀಡದೆ ಇದೀಗ ಅದರ ಮೇಲೆ ರಾಜಕೀಯ ಮಾಡುತ್ತಿರುವ ಆಮ್ ಆದ್ಮಿ ಹಾಗೂ ಆಪ್ ನಾಯಕರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಆಪ್ ಶಾಸಕ ತಪ್ಪನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…