ದೇಶ- ವಿದೇಶ

’ಅನುಕಂಪದ ಉದ್ಯೋಗ’ ಹಕ್ಕಲ್ಲ: ಸುಪ್ರೀಂ

ಹೊಸದಿಲ್ಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಮಹತ್ವದ ಅಭಿಪ್ರಾಯ ಪಟ್ಟಿದೆ.

ಈ ಸಂಬಂಧ ಪ್ರಕರಣವೊಂದರ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೊಪಣ್ಣ ಅವರನ್ನು ಒಳಗೊಂಡಂತ ನ್ಯಾಯಪೀಠವು, ಅನುಕಂಪದ ಆಧಾರದ ಉದ್ಯೋಗವು ಸಾಮಾನ್ಯ ನೇಮಕಾತಿಯಲ್ಲಿ ಇರುವ ವಿನಾಯ್ತಿಯಷ್ಟೇ. ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ಭದ್ರತೆ ಕಲ್ಪಿಸಲು ಇರುವ ಮಾನವೀಯ ನೆರವಾಗಿದೆ. ಈ ರೀತಿಯ ಸಹಾನುಭೂತಿಯ ಉದ್ಯೋಗ ಪಡೆದವರು, ಹುದ್ದೆ ಆಪೇಕ್ಷಿಸುವಂತಹ ಅರ್ಹತೆಗಳನ್ನು ಹೊಂದಿರಬೇಕು. ಕರ್ತವ್ಯಪರರಾಗಬೇಕು ಎಂದು ಹೇಳಿದೆ.

ಏನಿದು ಪ್ರಕರಣ?
ಅಂದಹಾಗೇ ಮೊಹಮ್ಮದ್ ರೆಹಮಾನ್ ಖಾನ್ ಅವರ ತಂದೆಯ ನಿಧನದ ನಂತರ, ಉತ್ತರ ಪ್ರದೇಶದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಬೆರಳಚ್ಚುಗಾರರ ಉದ್ಯೋಗವನ್ನು ೨೦೧೫ರಲ್ಲಿ ನೀಡಲಾಗಿತ್ತು. ಈ ಹುದ್ದೆಗೆ ಆಪೇಕ್ಷಿತವಾಗಿದ್ದ ಪ್ರತಿ ನಿಮಿಷಕ್ಕೆ ೨೫ ಪದಗಳ ಟೈಪಿಂಗ್ ವೇಗವನ್ನು ಸಾಧಿಸುವಂತೆ ಅವರಿಗೆ ಇಲಾಖೆ ಕಾಲಾವಕಾಶ ನೀಡಿತ್ತು.

ಆದರೆ, ಮೊಹಮ್ಮದ್ ರೆಹಮಾನ್ ಖಾನ್, ನಿಗದಿತ ಸಮಯದಲ್ಲಿ ಈ ಸಾಮರ್ಥ್ಯ ಹೊಂದಲು ವಿಫಲವಾಗಿದ್ದರು. ಹೀಗಿದ್ದರೂ ಹೆಚ್ಚುವರಿ ಕಾಲಾವಕಾಶ ನೀಡಿದ್ರು, ಅವರು ಕೌಶಲ ಸಿದ್ಧಿಸಲಿಲ್ಲ. ಹೀಗಾಗಿ ಪೂರ್ವ ಷರತ್ತಿನ ಅನ್ವಯದ ಕಾರಣ, ಕೆಲಸದಿಂದ ತೆಗೆದು ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಅಲ್ಲಿ ನಾಲ್ಕನೇ ದರ್ಜೆಯ ಉದ್ಯೋಗ ನೀಡುವಂತೆ ಆದೇಶಿಸಲಾಗಿತ್ತು. ಇದರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸವೋಚ್ಚ ನ್ಯಾಯಾಲಯದ ಮೊರೆ ಹೋಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತ ಪಡಿಸಿದೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago