ದೇಶ- ವಿದೇಶ

’ಅನುಕಂಪದ ಉದ್ಯೋಗ’ ಹಕ್ಕಲ್ಲ: ಸುಪ್ರೀಂ

ಹೊಸದಿಲ್ಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಮಹತ್ವದ ಅಭಿಪ್ರಾಯ ಪಟ್ಟಿದೆ.

ಈ ಸಂಬಂಧ ಪ್ರಕರಣವೊಂದರ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೊಪಣ್ಣ ಅವರನ್ನು ಒಳಗೊಂಡಂತ ನ್ಯಾಯಪೀಠವು, ಅನುಕಂಪದ ಆಧಾರದ ಉದ್ಯೋಗವು ಸಾಮಾನ್ಯ ನೇಮಕಾತಿಯಲ್ಲಿ ಇರುವ ವಿನಾಯ್ತಿಯಷ್ಟೇ. ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ಭದ್ರತೆ ಕಲ್ಪಿಸಲು ಇರುವ ಮಾನವೀಯ ನೆರವಾಗಿದೆ. ಈ ರೀತಿಯ ಸಹಾನುಭೂತಿಯ ಉದ್ಯೋಗ ಪಡೆದವರು, ಹುದ್ದೆ ಆಪೇಕ್ಷಿಸುವಂತಹ ಅರ್ಹತೆಗಳನ್ನು ಹೊಂದಿರಬೇಕು. ಕರ್ತವ್ಯಪರರಾಗಬೇಕು ಎಂದು ಹೇಳಿದೆ.

ಏನಿದು ಪ್ರಕರಣ?
ಅಂದಹಾಗೇ ಮೊಹಮ್ಮದ್ ರೆಹಮಾನ್ ಖಾನ್ ಅವರ ತಂದೆಯ ನಿಧನದ ನಂತರ, ಉತ್ತರ ಪ್ರದೇಶದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಬೆರಳಚ್ಚುಗಾರರ ಉದ್ಯೋಗವನ್ನು ೨೦೧೫ರಲ್ಲಿ ನೀಡಲಾಗಿತ್ತು. ಈ ಹುದ್ದೆಗೆ ಆಪೇಕ್ಷಿತವಾಗಿದ್ದ ಪ್ರತಿ ನಿಮಿಷಕ್ಕೆ ೨೫ ಪದಗಳ ಟೈಪಿಂಗ್ ವೇಗವನ್ನು ಸಾಧಿಸುವಂತೆ ಅವರಿಗೆ ಇಲಾಖೆ ಕಾಲಾವಕಾಶ ನೀಡಿತ್ತು.

ಆದರೆ, ಮೊಹಮ್ಮದ್ ರೆಹಮಾನ್ ಖಾನ್, ನಿಗದಿತ ಸಮಯದಲ್ಲಿ ಈ ಸಾಮರ್ಥ್ಯ ಹೊಂದಲು ವಿಫಲವಾಗಿದ್ದರು. ಹೀಗಿದ್ದರೂ ಹೆಚ್ಚುವರಿ ಕಾಲಾವಕಾಶ ನೀಡಿದ್ರು, ಅವರು ಕೌಶಲ ಸಿದ್ಧಿಸಲಿಲ್ಲ. ಹೀಗಾಗಿ ಪೂರ್ವ ಷರತ್ತಿನ ಅನ್ವಯದ ಕಾರಣ, ಕೆಲಸದಿಂದ ತೆಗೆದು ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಅಲ್ಲಿ ನಾಲ್ಕನೇ ದರ್ಜೆಯ ಉದ್ಯೋಗ ನೀಡುವಂತೆ ಆದೇಶಿಸಲಾಗಿತ್ತು. ಇದರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸವೋಚ್ಚ ನ್ಯಾಯಾಲಯದ ಮೊರೆ ಹೋಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತ ಪಡಿಸಿದೆ.

andolana

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

7 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

10 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

10 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

10 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

10 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

10 hours ago