ಹೊಸದಿಲ್ಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಮಹತ್ವದ ಅಭಿಪ್ರಾಯ ಪಟ್ಟಿದೆ.
ಈ ಸಂಬಂಧ ಪ್ರಕರಣವೊಂದರ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೊಪಣ್ಣ ಅವರನ್ನು ಒಳಗೊಂಡಂತ ನ್ಯಾಯಪೀಠವು, ಅನುಕಂಪದ ಆಧಾರದ ಉದ್ಯೋಗವು ಸಾಮಾನ್ಯ ನೇಮಕಾತಿಯಲ್ಲಿ ಇರುವ ವಿನಾಯ್ತಿಯಷ್ಟೇ. ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ಭದ್ರತೆ ಕಲ್ಪಿಸಲು ಇರುವ ಮಾನವೀಯ ನೆರವಾಗಿದೆ. ಈ ರೀತಿಯ ಸಹಾನುಭೂತಿಯ ಉದ್ಯೋಗ ಪಡೆದವರು, ಹುದ್ದೆ ಆಪೇಕ್ಷಿಸುವಂತಹ ಅರ್ಹತೆಗಳನ್ನು ಹೊಂದಿರಬೇಕು. ಕರ್ತವ್ಯಪರರಾಗಬೇಕು ಎಂದು ಹೇಳಿದೆ.
ಏನಿದು ಪ್ರಕರಣ?
ಅಂದಹಾಗೇ ಮೊಹಮ್ಮದ್ ರೆಹಮಾನ್ ಖಾನ್ ಅವರ ತಂದೆಯ ನಿಧನದ ನಂತರ, ಉತ್ತರ ಪ್ರದೇಶದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಬೆರಳಚ್ಚುಗಾರರ ಉದ್ಯೋಗವನ್ನು ೨೦೧೫ರಲ್ಲಿ ನೀಡಲಾಗಿತ್ತು. ಈ ಹುದ್ದೆಗೆ ಆಪೇಕ್ಷಿತವಾಗಿದ್ದ ಪ್ರತಿ ನಿಮಿಷಕ್ಕೆ ೨೫ ಪದಗಳ ಟೈಪಿಂಗ್ ವೇಗವನ್ನು ಸಾಧಿಸುವಂತೆ ಅವರಿಗೆ ಇಲಾಖೆ ಕಾಲಾವಕಾಶ ನೀಡಿತ್ತು.
ಆದರೆ, ಮೊಹಮ್ಮದ್ ರೆಹಮಾನ್ ಖಾನ್, ನಿಗದಿತ ಸಮಯದಲ್ಲಿ ಈ ಸಾಮರ್ಥ್ಯ ಹೊಂದಲು ವಿಫಲವಾಗಿದ್ದರು. ಹೀಗಿದ್ದರೂ ಹೆಚ್ಚುವರಿ ಕಾಲಾವಕಾಶ ನೀಡಿದ್ರು, ಅವರು ಕೌಶಲ ಸಿದ್ಧಿಸಲಿಲ್ಲ. ಹೀಗಾಗಿ ಪೂರ್ವ ಷರತ್ತಿನ ಅನ್ವಯದ ಕಾರಣ, ಕೆಲಸದಿಂದ ತೆಗೆದು ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಅಲ್ಲಿ ನಾಲ್ಕನೇ ದರ್ಜೆಯ ಉದ್ಯೋಗ ನೀಡುವಂತೆ ಆದೇಶಿಸಲಾಗಿತ್ತು. ಇದರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸವೋಚ್ಚ ನ್ಯಾಯಾಲಯದ ಮೊರೆ ಹೋಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತ ಪಡಿಸಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…