ಮುಜಫರ್ಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅಗೌರವದ ಹೇಳಿಕೆ ನೀಡಿದ ಆರೋಪದಡಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ನ್ಯಾಯಲಯವೊಂದಕ್ಕೆ ದೂರು ನೀಡಲಾಗಿದೆ.
ಸಂಸತ್ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸೋನಿಯಾ ಗಾಂಧಿ ಅವರು, ಬಡಪಾಯಿ ಮಹಿಳೆ, ರಾಷ್ಟ್ರಪತಿಯವರು ಭಾಷಣ ಮುಗಿಸುವ ಹೊತ್ತಿಗೆ ಸುಸ್ತಾಗಿದ್ದರು. ಅವರಿಗೆ ಮಾತನಾಡುವುದೇ ಕಷ್ಟವಾಗಿತ್ತು. ಇದು ಕಳಪೆ ವಿಷಯ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಷ್ಟ್ರಪತಿಗೆ ಅಗೌರವ ತೋರಿದ ಆರೋಪದಡಿ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ಮುಜಫರ್ ಪುರ ಮೂಲದ ವಕೀಲ ಸುಧೀರ್ ಓಜಾ ಎಂಬುವವರು ನ್ಯಾಯಾಲಯವೊಂದರಲ್ಲಿ ದೂರು ದಾಖಲಿಸಿದ್ದಾರೆ.
ಇದರ ಜೊತೆಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸಹ ಆರೋಪಿಗಳೆಂದು ಓಜಾ ಹೆಸರಿಸಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಫೆಬ್ರವರಿ.10ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…