ಮುಜಫರ್ಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅಗೌರವದ ಹೇಳಿಕೆ ನೀಡಿದ ಆರೋಪದಡಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ನ್ಯಾಯಲಯವೊಂದಕ್ಕೆ ದೂರು ನೀಡಲಾಗಿದೆ.
ಸಂಸತ್ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸೋನಿಯಾ ಗಾಂಧಿ ಅವರು, ಬಡಪಾಯಿ ಮಹಿಳೆ, ರಾಷ್ಟ್ರಪತಿಯವರು ಭಾಷಣ ಮುಗಿಸುವ ಹೊತ್ತಿಗೆ ಸುಸ್ತಾಗಿದ್ದರು. ಅವರಿಗೆ ಮಾತನಾಡುವುದೇ ಕಷ್ಟವಾಗಿತ್ತು. ಇದು ಕಳಪೆ ವಿಷಯ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಷ್ಟ್ರಪತಿಗೆ ಅಗೌರವ ತೋರಿದ ಆರೋಪದಡಿ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ಮುಜಫರ್ ಪುರ ಮೂಲದ ವಕೀಲ ಸುಧೀರ್ ಓಜಾ ಎಂಬುವವರು ನ್ಯಾಯಾಲಯವೊಂದರಲ್ಲಿ ದೂರು ದಾಖಲಿಸಿದ್ದಾರೆ.
ಇದರ ಜೊತೆಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸಹ ಆರೋಪಿಗಳೆಂದು ಓಜಾ ಹೆಸರಿಸಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಫೆಬ್ರವರಿ.10ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…