ಮುಜಫರ್ಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅಗೌರವದ ಹೇಳಿಕೆ ನೀಡಿದ ಆರೋಪದಡಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ನ್ಯಾಯಲಯವೊಂದಕ್ಕೆ ದೂರು ನೀಡಲಾಗಿದೆ.
ಸಂಸತ್ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸೋನಿಯಾ ಗಾಂಧಿ ಅವರು, ಬಡಪಾಯಿ ಮಹಿಳೆ, ರಾಷ್ಟ್ರಪತಿಯವರು ಭಾಷಣ ಮುಗಿಸುವ ಹೊತ್ತಿಗೆ ಸುಸ್ತಾಗಿದ್ದರು. ಅವರಿಗೆ ಮಾತನಾಡುವುದೇ ಕಷ್ಟವಾಗಿತ್ತು. ಇದು ಕಳಪೆ ವಿಷಯ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಷ್ಟ್ರಪತಿಗೆ ಅಗೌರವ ತೋರಿದ ಆರೋಪದಡಿ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ಮುಜಫರ್ ಪುರ ಮೂಲದ ವಕೀಲ ಸುಧೀರ್ ಓಜಾ ಎಂಬುವವರು ನ್ಯಾಯಾಲಯವೊಂದರಲ್ಲಿ ದೂರು ದಾಖಲಿಸಿದ್ದಾರೆ.
ಇದರ ಜೊತೆಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸಹ ಆರೋಪಿಗಳೆಂದು ಓಜಾ ಹೆಸರಿಸಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಫೆಬ್ರವರಿ.10ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…