ದೇಶ- ವಿದೇಶ

ಪ್ರವಾಹ ಸಂತ್ರಸ್ತರ ಬಸ್‌ ನಲ್ಲಿದ್ದ ಮಕ್ಕಳು  ಸಂಪೂರ್ಣ ಸಜೀವ ದಹನ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಬಸ್ವೊಂದಕ್ಕೆ ಬೆಂಕಿಹೊತ್ತಿಕೊಂಡಿದ್ದು, ಅಪಘಾತದಲ್ಲಿ 12 ಮಕ್ಕಳು ಸೇರಿದಂತೆ 21 ಮಂದಿ ಸಜೀವ ದಹನವಾಗಿರುವ ಘಟನೆ ನಿನ್ನೆ ಮಧ್ಯರಾತ್ರಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಮ್ಶೋರೊ ಜಿಲ್ಲೆಯ ನೂರಿಯಾಬಾದ್ ಬಳಿಯ ಎಂ9 ಮೋಟರ್ವೇಯಲ್ಲಿ ನಡೆದಿದೆ.

ಘಟನೆಯ ದೃಶ್ಯಾವಳಿಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ವಿಡಿಯೋದಲ್ಲಿ, ರಸ್ತೆಯಲ್ಲಿ ನಿಂತಿರುವ ಬಸ್‌ಗೆ ಬೆಂಕಿಹೊತ್ತಿಕೊಂಡಿದ್ದು, ಧಗಧಗಿಸುತ್ತಿರುವುದನ್ನು ನೋಡಬಹುದು. ಮೃತರೆಲ್ಲರೂ ಪ್ರವಾಹ ಸಂತ್ರಸ್ತರಾಗಿದ್ದು, ಕರಾಚಿಯಿಂದ ತಮ್ಮ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಅಧಿಕಾರಿಗಳು ನೀಡಿದ ವಿವರಗಳ ಪ್ರಕಾರ, ಆಗಸ್ಟ್‌ನಲ್ಲಿ ಪಾಕಿಸ್ತಾನದಲ್ಲಿ ತೀವ್ರ ಪ್ರವಾಹ ಉಂಟಾಗಿತ್ತು. ಈ ವೇಳೆ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರನ್ನು ಕರಾಚಿಯ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿತ್ತು. ಈಗ ಇಲ್ಲಿನ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಹೀಗಾಗಿ, ಸಿಂಧ್ ಪ್ರಾಂತ್ಯದ 45 ಜನರು ಎಸಿ ಬಸ್‌ನಲ್ಲಿ ತಮ್ಮ ಹಳ್ಳಿಗಳಿಗೆ ಹೊರಟರು. ಬಸ್ ರಸ್ತೆಯಲ್ಲಿ ಸಾಗುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಬಸ್ ಸುಟ್ಟು ಬೂದಿಯಾಗಿದೆ. ನಿವಾಸಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರು. ಕಿಟಕಿಗಳು ಮುಚ್ಚಿದ್ದರಿಂದ ಹೊರಗೆ ಬರಲು ಸಾಧ್ಯವಾಗಲಿಲ್ಲ. ಬೆಂಕಿಯಿಂದ ಕೆಲವರು ಸುಟ್ಟು ಕರಕಲಾದರೆ, ಇನ್ನು ಕೆಲವರು ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಪ್ರಾಣ ಕಳೆದುಕೊಂಡಿದ್ದಾರೆ.

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

1 hour ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

1 hour ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago