ಪಾಕಿಸ್ತಾನ: ಪಾಕಿಸ್ತಾನದಲ್ಲಿ ಬಸ್ವೊಂದಕ್ಕೆ ಬೆಂಕಿಹೊತ್ತಿಕೊಂಡಿದ್ದು, ಅಪಘಾತದಲ್ಲಿ 12 ಮಕ್ಕಳು ಸೇರಿದಂತೆ 21 ಮಂದಿ ಸಜೀವ ದಹನವಾಗಿರುವ ಘಟನೆ ನಿನ್ನೆ ಮಧ್ಯರಾತ್ರಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಮ್ಶೋರೊ ಜಿಲ್ಲೆಯ ನೂರಿಯಾಬಾದ್ ಬಳಿಯ ಎಂ9 ಮೋಟರ್ವೇಯಲ್ಲಿ ನಡೆದಿದೆ.
ಘಟನೆಯ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ವಿಡಿಯೋದಲ್ಲಿ, ರಸ್ತೆಯಲ್ಲಿ ನಿಂತಿರುವ ಬಸ್ಗೆ ಬೆಂಕಿಹೊತ್ತಿಕೊಂಡಿದ್ದು, ಧಗಧಗಿಸುತ್ತಿರುವುದನ್ನು ನೋಡಬಹುದು. ಮೃತರೆಲ್ಲರೂ ಪ್ರವಾಹ ಸಂತ್ರಸ್ತರಾಗಿದ್ದು, ಕರಾಚಿಯಿಂದ ತಮ್ಮ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಧಿಕಾರಿಗಳು ನೀಡಿದ ವಿವರಗಳ ಪ್ರಕಾರ, ಆಗಸ್ಟ್ನಲ್ಲಿ ಪಾಕಿಸ್ತಾನದಲ್ಲಿ ತೀವ್ರ ಪ್ರವಾಹ ಉಂಟಾಗಿತ್ತು. ಈ ವೇಳೆ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರನ್ನು ಕರಾಚಿಯ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿತ್ತು. ಈಗ ಇಲ್ಲಿನ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಹೀಗಾಗಿ, ಸಿಂಧ್ ಪ್ರಾಂತ್ಯದ 45 ಜನರು ಎಸಿ ಬಸ್ನಲ್ಲಿ ತಮ್ಮ ಹಳ್ಳಿಗಳಿಗೆ ಹೊರಟರು. ಬಸ್ ರಸ್ತೆಯಲ್ಲಿ ಸಾಗುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಬಸ್ ಸುಟ್ಟು ಬೂದಿಯಾಗಿದೆ. ನಿವಾಸಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರು. ಕಿಟಕಿಗಳು ಮುಚ್ಚಿದ್ದರಿಂದ ಹೊರಗೆ ಬರಲು ಸಾಧ್ಯವಾಗಲಿಲ್ಲ. ಬೆಂಕಿಯಿಂದ ಕೆಲವರು ಸುಟ್ಟು ಕರಕಲಾದರೆ, ಇನ್ನು ಕೆಲವರು ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಪ್ರಾಣ ಕಳೆದುಕೊಂಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…