ದೇಶ- ವಿದೇಶ

ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿದ ಬಳಿಕ ಮೊದಲ ಮನ್‌ ಕಿ ಬಾತ್‌ ಕಾರ್ಯಕ್ರಮದ ಮೊದಲ ಸಂಚಿಕೆಯಲ್ಲಿ ದೇಶದ ಜನರೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದು ಪ್ರಧಾನಿ ಮೋದಿ ಅವರ ಮನ್‌ ಕಿ ಬಾತ್‌ ಕಾರ್ಯಕ್ರಮದ 111ನೇ ಸಂಚಿಕೆಯಾಗಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ಅಧಿಕಾರಕ್ಕೆ ಮರು ಆಯ್ಕೆ ಮಾಡಿದ್ದಕ್ಕಾಗಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ನಂಬಿಕೆಯನ್ನು ಜನರು ಚುನಾವಣೆಯಲ್ಲಿ ಮರು ಸ್ಥಾಪಿಸಿದ್ದಾರೆ. ಅಲ್ಲದೇ 2024ರ ಚುನಾವಣೆ ವಿಶ್ವದ ಅತಿದೊಡ್ಡ ಚುನಾವಣೆಯಾಗಿದೆ. ಇಷ್ಟು ದೊಡ್ಡ ಚುನಾವಣೆ ಜಗತ್ತಿನ ಯಾವುದೇ ದೇಶದಲ್ಲಿ ನಡೆದಿಲ್ಲ. ಈ ಚುನಾವಣೆಯಲ್ಲಿ ದೇಶದ 65 ಕೋಟಿ ಜನರು ಮತ ಚಲಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಲೋಕಸಭೆ ಚುನಾವಣೆ ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಚುನಾವಣಾ ಆಯೋಗ ಮತ್ತು ಮತದಾನ ಪ್ರಕ್ರಿಯೆಗೆ ಸಂಬಂಧಿಸಿದ ಪ್ರತಿಯೊಬ್ಬರನ್ನು ಅಭಿನಂದಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

3 mins ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

20 mins ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…

42 mins ago

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

1 hour ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

2 hours ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

2 hours ago