ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ, ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಆಗ್ರಹಿಸಿದ್ದಾರೆ.
ಕೂಡಲೇ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಹಾಗೂ ಸಂಸತ್ನಲ್ಲಿ ವಿಶೇಷ ಅಧಿವೇಶನ ಕರೆದರೆ ಈ ಎಲ್ಲ ವಿಷಯಗಳ ಬಗ್ಗೆ ಸಮಗ್ರವಾಗಿ ಚರ್ಚಿಸಬಹುದು ಎಂದು ಹೇಳಿದ್ದಾರೆ.
ಮುಂದುವರಿದು ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಕುರಿತ ಚರ್ಚೆಗೆ ತಟಸ್ಥ ವೇದಿಕೆಯ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಪ್ರಸ್ತಾಪಿಸಿರುವುದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ನಂಬುತ್ತದೆ. ನಾವು ಶಿಮ್ಲಾ ಒಪ್ಪಂದವನ್ನು ಕೈಬಿಟ್ಟಿದ್ದೇವೆಯೇ? 3ನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಆಹ್ವಾನ ಕೊಟ್ಟಿದ್ದೇವೆ ಎಂಬ ಅನುಮಾನ ಮೂಡಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ರಾಜತಾಂತ್ರಿಕ ಮಾರ್ಗಗಳನ್ನು ಮತ್ತೆ ತೆರೆಯಲಾಗುತ್ತಿದೆಯೇ? ಎಂದು ಕಾಂಗ್ರೆಸ್ ಕೇಳಲು ಬಯಸುತ್ತದೆ. ನಾವು ಪಾಕಿಸ್ತಾನದಿಂದ ಯಾವ ಬದ್ಧತೆ ಬಯಸಿದ್ದೇವೆ, ಅದರಿಂದ ನಮಗೆ ಏನು ಸಿಕ್ಕಿದೆ? ಈ ಇಡೀ ಪರಿಸ್ಥಿತಿಯ ಕುರಿತು ದೇಶದ ಇಬ್ಬರು ಮಾಜಿ ಸೇನಾ ಮುಖ್ಯಸ್ಥರು ನೀಡಿದ ಹೇಳಿಕೆಗಳ ಬಗ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗಮನ ಸೆಳೆಯಲು ಬಯಸುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿಗಳೇ ಪ್ರತಿಕ್ರಿಯಿಸಬೇಕು ಎಂದು ಮನವಿ ಮಾಡಿದ್ದಾರೆ.
ಕೊನೆಯದ್ದಾಗಿ, 1971ರಲ್ಲಿ ಇಂದಿರಾ ಗಾಂಧಿಯವರು ಪ್ರದರ್ಶಿಸಿದ ಅಸಾಧಾರಣ ದಿಟ್ಟ ಮತ್ತು ದೃಢನಿಶ್ಚಯದ ನಾಯಕತ್ವವನ್ನು ದೇಶವು ನೆನಪಿಸಿಕೊಳ್ಳುವುದು ಸ್ವಾಭಾವಿಕ ಎಂದು ರಾಷ್ಟ್ರೀಯ ಕಾಂಗ್ರೆಸ್ ನಂಬುತ್ತದೆ ಎಂದು ಜೈರಾಮ್ ರಮೇಶ್ ಬರೆದುಕೊಂಡಿದ್ದಾರೆ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…