ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ದಿನಕ್ಕೆ 400 ರೂ. ಗುರಿ ಇಟ್ಟುಕೊಂಡು ನರೇಗಾ ವೇತನವನ್ನು ಹೆಚ್ಚಿಸಬೇಕು. ವೇತನ ದರದಲ್ಲಿ ಬದಲಾವಣೆಯ ಅಗತ್ಯವನ್ನು ಮೌಲ್ಯಮಾಪನ ಮಾಡಲು ಸ್ಥಾಯಿ ಸಮಿತಿ ಸ್ಥಾಪಿಸಬೇಕು. ಅಲ್ಲದೇ, ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ
150ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೋವಿಡ್ ಸಮಯದಲ್ಲಿ ನರೇಗಾ ಯೋಜನೆಯು ಜನರ ಹಣಕಾಸಿನ ವಿಷಯದಲ್ಲಿ ನಿರ್ಣಾಯಕ ಪಾತ್ರವಹಿಸಿದೆ. 2019-20ರಲ್ಲಿ 6.16 ಕೋಟಿ ಕುಟುಂಬಗಳು ಈ ಯೋಜನೆಯಡಿಯಲ್ಲಿ ಕೆಲಸ ಮಾಡಲು ವಿನಂತಿಸಿದ್ದರು. ನಂತರ 2020-21ರಲ್ಲಿ ಈ ಸಂಖ್ಯೆಯು 8.55 ಕೋಟಿಗೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…