ದೇಶ- ವಿದೇಶ

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ.

ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ ಕುರಿತು ಡಿಎಂಕೆ ಮಾತುಕತೆ ಆರಂಭಿಸಿದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್‌ ಅಂತ್ಯ ಅಥವಾ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ.

ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಬೇಡಿಕೆಯನ್ನು ಡಿಎಂಕೆ ಪರಿಗಣಿಸುವುದು ಕಷ್ಟವಿದೆ. ಹೆಚ್ಚಿನ ಸೀಟುಗಳಿಗೆ ಕಾಂಗ್ರೆಸ್‌ ಬೇಡಿಕೆ ಇಟ್ಟಿದೆ. ಆದರೆ ಮೈತ್ರಿಕೂಟದಲ್ಲಿ ಹೆಚ್ಚು ಪಕ್ಷಗಳು ಇರುವ ಕಾರಣಕ್ಕೆ ಸೀಟು ನೀಡಬಾರದು ಎಂಬುದು ಡಿಎಂಕೆ ವಾದವಾಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆ 2026ರಲ್ಲಿ ಕಾಂಗ್ರೆಸ್‌ ಬೇಡಿಕೆ ಇಟ್ಟಿರುವಷ್ಟು ಹೆಚ್ಚಿನ ಸೀಟುಗಳನ್ನು ನೀಡುವ ಒತ್ತಾಯಕ್ಕೆ ಡಿಎಂಕೆ ಮಣಿಯುವ ಸ್ಥಿತಿಯಲ್ಲಿ ಇಲ್ಲ. ಕಾಂಗ್ರೆಸ್‌ ಕನಿಷ್ಠ 39 ಸೀಟುಗಳು ಬೇಕು ಎಂದು ಬೇಡಿಕೆ ಇಟ್ಟಿದ್ದು, ಆಡಳಿತಾರೂಢ ಡಿಎಂಕೆ ನಾಯಕತ್ವ ಇದನ್ನು ನಿರಾಕರಿಸಿದೆ.

ನಾವು ನಮ್ಮ ಪ್ರಸ್ತಾಪವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಅವರಿಗೆ 25 ವಿಧಾನಸಭಾ ಸ್ಥಾನಗಳು ಮತ್ತು 1 ರಾಜ್ಯಸಭಾ ಸ್ಥಾನವನ್ನು ನೀಡಲು ಸಿದ್ಧರಿದ್ದೇವೆ. ಆದರೆ ಕಾಂಗ್ರೆಸ್‌ 39 ವಿಧಾನಸಭಾ ಸ್ಥಾನಗಳು ಮತ್ತು ಎರಡು ರಾಜ್ಯಸಭಾ ಸ್ಥಾನಗಳನ್ನು ಕೇಳುತ್ತಿದೆ ಎಂದು ಡಿಎಂಕೆ ನಾಯಕರೊಬ್ಬರು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

2 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

3 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

3 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

8 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

8 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

8 hours ago