ದೇಶ- ವಿದೇಶ

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ.

ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ ಕುರಿತು ಡಿಎಂಕೆ ಮಾತುಕತೆ ಆರಂಭಿಸಿದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್‌ ಅಂತ್ಯ ಅಥವಾ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ.

ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಬೇಡಿಕೆಯನ್ನು ಡಿಎಂಕೆ ಪರಿಗಣಿಸುವುದು ಕಷ್ಟವಿದೆ. ಹೆಚ್ಚಿನ ಸೀಟುಗಳಿಗೆ ಕಾಂಗ್ರೆಸ್‌ ಬೇಡಿಕೆ ಇಟ್ಟಿದೆ. ಆದರೆ ಮೈತ್ರಿಕೂಟದಲ್ಲಿ ಹೆಚ್ಚು ಪಕ್ಷಗಳು ಇರುವ ಕಾರಣಕ್ಕೆ ಸೀಟು ನೀಡಬಾರದು ಎಂಬುದು ಡಿಎಂಕೆ ವಾದವಾಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆ 2026ರಲ್ಲಿ ಕಾಂಗ್ರೆಸ್‌ ಬೇಡಿಕೆ ಇಟ್ಟಿರುವಷ್ಟು ಹೆಚ್ಚಿನ ಸೀಟುಗಳನ್ನು ನೀಡುವ ಒತ್ತಾಯಕ್ಕೆ ಡಿಎಂಕೆ ಮಣಿಯುವ ಸ್ಥಿತಿಯಲ್ಲಿ ಇಲ್ಲ. ಕಾಂಗ್ರೆಸ್‌ ಕನಿಷ್ಠ 39 ಸೀಟುಗಳು ಬೇಕು ಎಂದು ಬೇಡಿಕೆ ಇಟ್ಟಿದ್ದು, ಆಡಳಿತಾರೂಢ ಡಿಎಂಕೆ ನಾಯಕತ್ವ ಇದನ್ನು ನಿರಾಕರಿಸಿದೆ.

ನಾವು ನಮ್ಮ ಪ್ರಸ್ತಾಪವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಅವರಿಗೆ 25 ವಿಧಾನಸಭಾ ಸ್ಥಾನಗಳು ಮತ್ತು 1 ರಾಜ್ಯಸಭಾ ಸ್ಥಾನವನ್ನು ನೀಡಲು ಸಿದ್ಧರಿದ್ದೇವೆ. ಆದರೆ ಕಾಂಗ್ರೆಸ್‌ 39 ವಿಧಾನಸಭಾ ಸ್ಥಾನಗಳು ಮತ್ತು ಎರಡು ರಾಜ್ಯಸಭಾ ಸ್ಥಾನಗಳನ್ನು ಕೇಳುತ್ತಿದೆ ಎಂದು ಡಿಎಂಕೆ ನಾಯಕರೊಬ್ಬರು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago