ದೇಶ- ವಿದೇಶ

ಟಿವಿಕೆʼಗೆ ಕಾಂಗ್ರೆಸ್‌ ಷರತ್ತುಬದ್ಧ ಬೆಂಬಲ

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ) ಸರ್ಕಾರ ರಚಿಸಲು ಕಾಂಗ್ರೆಸ್ ಷರತ್ತುಬದ್ಧ ಬೆಂಬಲ ನೀಡಲು ಸರ್ವಾನುಮತದಿಂದ ನಿರ್ಧರಿಸಿದೆ.

108 ಸ್ಥಾನ, ಬಹುಮತಕ್ಕೆ 10 ಕಡಿಮೆ
234 ಸದಸ್ಯ ಬಲದ ವಿಧಾನಸಭೆಯಲ್ಲಿ ಟಿವಿಕೆ 108 ಸ್ಥಾನ ಗೆದ್ದು ಬಹುಮತಕ್ಕೆ 10 ಸ್ಥಾನಗಳ ಕೊರತೆ ಎದುರಿಸುತ್ತಿದೆ. ಮೇ 4ರ ಫಲಿತಾಂಶದಲ್ಲಿ ಡಿಎಂಕೆ ಎರಡನೇ ಸ್ಥಾನಕ್ಕೆ, ಎಐಎಡಿಎಂಕೆ ಮೂರನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಟಿವಿಕೆ ಅಧ್ಯಕ್ಷ ವಿಜಯ್ ಕಾಂಗ್ರೆಸ್ ನಾಯಕತ್ವಕ್ಕೆ ಬೆಂಬಲ ಕೋರಿ ಮನವಿ ಮಾಡಿದ್ದರು.

ತಡರಾತ್ರಿ ಸಭೆ, ಬೆಂಬಲಕ್ಕೆ ಒಮ್ಮತ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ದೆಹಲಿಯಲ್ಲಿ ವಿಜಯ್ ಮನವಿ ಖಚಿತಪಡಿಸಿದ್ದು, ಅಂತಿಮ ತೀರ್ಮಾನವನ್ನು ಡಿಎನ್‌ಸಿಸಿ ಬಿಟ್ಟಿದ್ದರು. ಮಂಗಳವಾರ ರಾತ್ರಿ ಟಿಎನ್‌ಸಿಸಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ನೇತೃತ್ವದಲ್ಲಿ ಗೂಗಲ್ ಮೀಟ್ ಮೂಲಕ ನಡೆದ ಸಭೆಯಲ್ಲಿ ಶಾಸಕರು, ಹಿರಿಯ ನಾಯಕರು ಟಿವಿಕೆಗೆ ಬೆಂಬಲ ನೀಡಲು ಒಪ್ಪಿಗೆ ಸೂಚಿಸಿದರು.

ಕಾಂಗ್ರೆಸ್‌ನ ಷರತ್ತುಗಳೇನು?
ಮೂಲಗಳ ಪ್ರಕಾರ, ಕಾಂಗ್ರೆಸ್ ಬೆಂಬಲಕ್ಕೆ ಮೂರು ಪ್ರಮುಖ ಷರತ್ತು ಹಾಕಿದೆ:
1. ಸಚಿವ ಸಂಪುಟದಲ್ಲಿ ಎರಡು ಸ್ಥಾನ.
2. ಪ್ರಮುಖ ಮಂಡಳಿ, ನಿಗಮಗಳ ಅಧ್ಯಕ್ಷ ಸ್ಥಾನ.
3. ಬಿಜೆಪಿ ಅಥವಾ ಎನ್‌ಡಿಎ ಘಟಕಗಳ ಬೆಂಬಲ ಪಡೆಯಬಾರದು.

ಐದು ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಬೆಂಬಲದೊಂದಿಗೆ ಟಿವಿಕೆಯ ಸಂಖ್ಯಾಬಲ 113ಕ್ಕೆ ಏರಲಿದೆ. ಜೊತೆಗೆ ಸಿಪಿಐ, ಸಿಪಿಎಂ, ವಿಸಿಕೆ, ಐಯುಎಂಎಲ್ ತಲಾ ಎರಡು ಸ್ಥಾನ ಹೊಂದಿದ್ದು, ಇವರ ಬೆಂಬಲವೂ ಸಿಕ್ಕರೆ 118ರ ಬಹುಮತದ ಗಡಿ ದಾಟಲಿದೆ.

ಇಂಡಿಯಾ ಮೈತ್ರಿಗೆ ತಿರುವು
ಕೇಂದ್ರದಲ್ಲಿ ಡಿಎಂಕೆ ಜೊತೆ ಇಂಡಿಯಾ ಮೈತ್ರಿಕೂಟದಲ್ಲಿರುವ ಕಾಂಗ್ರೆಸ್, ರಾಜ್ಯದಲ್ಲಿ ಡಿಎಂಕೆಯನ್ನು ಬಿಟ್ಟು ಟಿವಿಕೆಗೆ ಬೆಂಬಲ ನೀಡಿರುವುದು ರಾಷ್ಟ್ರ ರಾಜಕಾರಣದಲ್ಲೂ ಸಂಚಲನ ಮೂಡಿಸಿದೆ. ‘ತಮಿಳುನಾಡಿನಲ್ಲಿ ಜಾತ್ಯತೀತ ಸರ್ಕಾರ ಬೇಕು. ಸಂವಿಧಾನ ರಕ್ಷಿಸುವ ಸರ್ಕಾರಕ್ಕೆ ನಮ್ಮ ಬೆಂಬಲ. ಬಿಜೆಪಿ ಅಥವಾ ಅದರ ಪ್ರಾಕ್ಸಿ ಸರ್ಕಾರ ಬರಲು ಬಿಡುವುದಿಲ್ಲ’ ಎಂದು ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.

ದ್ರಾವಿಡ ಯುಗಕ್ಕೆ ಅಂತ್ಯ?
2024ರ ಫೆಬ್ರವರಿಯಲ್ಲಿ ಪಕ್ಷ ಸ್ಥಾಪಿಸಿದ ವಿಜಯ್, ಮೊದಲ ಚುನಾವಣೆಯಲ್ಲೇ 108 ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಡಿಎಂಕೆ, ಎಐಎಡಿಎಂಕೆ ದ್ವಿಧ್ರುವಿ ರಾಜಕಾರಣವನ್ನು ಮುರಿದು ತಮಿಳುನಾಡಿನಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

1 hour ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

1 hour ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

1 hour ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

2 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

2 hours ago