ರಾಜಸ್ತಾನ: ರೈತರಿಗಾಗಿ ಕಾಂಗ್ರೆಸ್ ಏನು ಮಾಡಿಲ್ಲದಿದ್ದರು ಅವರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.
ರಾಜಸ್ಥಾನದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಆಡಳಿತ ಪೂರೈಸಿದ ಕಾರಣ ʼಒಂದು ವರ್ಷ, ಪರಿಣಾಮ ಉತ್ಕರ್ಷʼ ಕಾರ್ಯಕ್ರಮ ಉದ್ಘಾಟಿಸಿ, ಪ್ರಧಾನಿ ಮೋದಿ ಅವರು ಮಾತನಾಡಿದರು. ಇದೇ ವೇಳೆ 46,330 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲು, ಮತ್ತು ನೀರು ಇನ್ನಿತರ ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಿದರು.
ರೈತರಿಗಾಗಿ ಕಾಂಗ್ರೆಸ್ ಏನು ಮಾಡುವುದಿಲ್ಲ, ಇತರರಿಗೂ ಮಾಡಲು ಬಿಡುವುದಿಲ್ಲ” ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರನ್ನು ನಿರ್ಲಕ್ಷಿಸುತ್ತದೆ. ಪೂರ್ವ ರಾಜಸ್ಥಾನ ಕಾಲುವೆ ಯೋಜನೆ ಬಹಳ ವಿಳಂಬವಾಗಲು ಕಾಂಗ್ರೆಸ್ ಕಾರಣ ಎಂದು ಕಿಡಿಕಾರಿದರು.
ನಮ್ಮ ಸರ್ಕಾರ ಸಹಕಾರದಲ್ಲಿ ನಂಬಿಕೆ ಇಟ್ಟಿದೆ ವಿನಃ ಸಂಘರ್ಷದಲ್ಲಲ್ಲ. ನಾವು ಸಮಸ್ಯೆಯನ್ನು ಸರಿಮಾಡುತ್ತೇವೆ ಹೊರತು ಹುಟ್ಟುಹಾಕುವುದಿಲ್ಲ. ಆದ್ದರಿಂದ ಪೂರ್ವ ರಾಜಸ್ಥಾನ ಕಾಲುವೆ ಯೋಜನೆಗೆ ಅನುಮೋದನೆ ನೀಡುವ ಮೂಲಕ ಯೋಜನೆಯನ್ನು ವಿಸ್ತರಿಸಿದ್ದೇವೆ ಎಂದರು.
ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ತಕ್ಷಣವೇ ಪಾರ್ವತಿ-ಕಲಿಸಿಂಧ್-ಚಂಬಲ್ ಯೋಜನೆ ಒಪ್ಪಂದಕ್ಕೆ ತರಲಾಯಿತು ಎಂದು ಹೇಳಿದರು.
ಕಾಂಗ್ರೆಸ್ ನೀರಿನ ಸಮಸ್ಯೆಗೆ ಎಂದಿಗೂ ಸ್ಪಂದಿಸುವುದಿಲ್ಲ. ನಮ್ಮ ನೀರು ಗಡಿ ದಾಟಿ ಹರಿಯುತ್ತಿದ್ದರು ಪರಿಹಾರ ಕಂಡುಕೊಳ್ಳದ ಕಾಂಗ್ರೆಸ್ ಎರಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ ಎಂದು ಹೇಳಿದರು.
ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…
ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್ಟಿಸಿ…
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…