ರಾಜಸ್ತಾನ: ರೈತರಿಗಾಗಿ ಕಾಂಗ್ರೆಸ್ ಏನು ಮಾಡಿಲ್ಲದಿದ್ದರು ಅವರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.
ರಾಜಸ್ಥಾನದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಆಡಳಿತ ಪೂರೈಸಿದ ಕಾರಣ ʼಒಂದು ವರ್ಷ, ಪರಿಣಾಮ ಉತ್ಕರ್ಷʼ ಕಾರ್ಯಕ್ರಮ ಉದ್ಘಾಟಿಸಿ, ಪ್ರಧಾನಿ ಮೋದಿ ಅವರು ಮಾತನಾಡಿದರು. ಇದೇ ವೇಳೆ 46,330 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲು, ಮತ್ತು ನೀರು ಇನ್ನಿತರ ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಿದರು.
ರೈತರಿಗಾಗಿ ಕಾಂಗ್ರೆಸ್ ಏನು ಮಾಡುವುದಿಲ್ಲ, ಇತರರಿಗೂ ಮಾಡಲು ಬಿಡುವುದಿಲ್ಲ” ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರನ್ನು ನಿರ್ಲಕ್ಷಿಸುತ್ತದೆ. ಪೂರ್ವ ರಾಜಸ್ಥಾನ ಕಾಲುವೆ ಯೋಜನೆ ಬಹಳ ವಿಳಂಬವಾಗಲು ಕಾಂಗ್ರೆಸ್ ಕಾರಣ ಎಂದು ಕಿಡಿಕಾರಿದರು.
ನಮ್ಮ ಸರ್ಕಾರ ಸಹಕಾರದಲ್ಲಿ ನಂಬಿಕೆ ಇಟ್ಟಿದೆ ವಿನಃ ಸಂಘರ್ಷದಲ್ಲಲ್ಲ. ನಾವು ಸಮಸ್ಯೆಯನ್ನು ಸರಿಮಾಡುತ್ತೇವೆ ಹೊರತು ಹುಟ್ಟುಹಾಕುವುದಿಲ್ಲ. ಆದ್ದರಿಂದ ಪೂರ್ವ ರಾಜಸ್ಥಾನ ಕಾಲುವೆ ಯೋಜನೆಗೆ ಅನುಮೋದನೆ ನೀಡುವ ಮೂಲಕ ಯೋಜನೆಯನ್ನು ವಿಸ್ತರಿಸಿದ್ದೇವೆ ಎಂದರು.
ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ತಕ್ಷಣವೇ ಪಾರ್ವತಿ-ಕಲಿಸಿಂಧ್-ಚಂಬಲ್ ಯೋಜನೆ ಒಪ್ಪಂದಕ್ಕೆ ತರಲಾಯಿತು ಎಂದು ಹೇಳಿದರು.
ಕಾಂಗ್ರೆಸ್ ನೀರಿನ ಸಮಸ್ಯೆಗೆ ಎಂದಿಗೂ ಸ್ಪಂದಿಸುವುದಿಲ್ಲ. ನಮ್ಮ ನೀರು ಗಡಿ ದಾಟಿ ಹರಿಯುತ್ತಿದ್ದರು ಪರಿಹಾರ ಕಂಡುಕೊಳ್ಳದ ಕಾಂಗ್ರೆಸ್ ಎರಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ ಎಂದು ಹೇಳಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…