Mysore
22
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗಂಭೀರ ಆರೋಪ ಮಾಡಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆಯ ಹಿನ್ನೆಲೆಯಲ್ಲಿ ಬಿಜೆಪಿಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಣಿವೆ ರಾಜ್ಯದಲ್ಲಿ ಐತಿಹಾಸಿಕ ಚುನಾವಣೆ ನಡೆಯಲಿದೆ.

ಮುಂಬರುವ ಚುನಾವಣೆ ಐತಿಹಾಸಿಕವಾಗಿರಲಿದೆ. ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದ ಜನರು ಒಂದೇ ತ್ರಿವರ್ಣ ಧ್ವಜದ ಅಡಿಯಲ್ಲಿ ಮತ ಚಲಾಯಿಸಲಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್‌ ಅವರ ಸಂವಿಧಾನದ ಅಡಿಯಲ್ಲಿ ಚುನಾವಣೆ ನಡೆಯಲಿದೆ. ದೇಶದಲ್ಲಿ ಇಬ್ಬರು ಪ್ರಧಾನಿಗಳು ಇರಲು ಸಾಧ್ಯವಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಜನರು ಪ್ರಧಾನಿ ಮೋದಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಚುನಾವಣೆಯ ನಂತರ ಸೂಕ್ತ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವುದಾಗಿ ನಾನು ವಾಗ್ದಾನ ನೀಡಿದ್ದೇನೆ. ಇದು ಯಾವುದೇ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಲ್ಲ. ಸಂಸತ್ತಿನಲ್ಲಿ ಹೇಳಿರುವುದು ಎಂದು ಇದೇ ಸಮಯದಲ್ಲಿ ಅವರು ಉಲ್ಲೇಖಿಸಿದ್ದಾರೆ.

Tags:
error: Content is protected !!