ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.
ಜಮ್ಮು-ಕಾಶ್ಮೀರ ವಿಧಾನಸಭೆಯ ಹಿನ್ನೆಲೆಯಲ್ಲಿ ಬಿಜೆಪಿಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಣಿವೆ ರಾಜ್ಯದಲ್ಲಿ ಐತಿಹಾಸಿಕ ಚುನಾವಣೆ ನಡೆಯಲಿದೆ.
ಮುಂಬರುವ ಚುನಾವಣೆ ಐತಿಹಾಸಿಕವಾಗಿರಲಿದೆ. ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದ ಜನರು ಒಂದೇ ತ್ರಿವರ್ಣ ಧ್ವಜದ ಅಡಿಯಲ್ಲಿ ಮತ ಚಲಾಯಿಸಲಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ಚುನಾವಣೆ ನಡೆಯಲಿದೆ. ದೇಶದಲ್ಲಿ ಇಬ್ಬರು ಪ್ರಧಾನಿಗಳು ಇರಲು ಸಾಧ್ಯವಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಜನರು ಪ್ರಧಾನಿ ಮೋದಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಚುನಾವಣೆಯ ನಂತರ ಸೂಕ್ತ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವುದಾಗಿ ನಾನು ವಾಗ್ದಾನ ನೀಡಿದ್ದೇನೆ. ಇದು ಯಾವುದೇ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಲ್ಲ. ಸಂಸತ್ತಿನಲ್ಲಿ ಹೇಳಿರುವುದು ಎಂದು ಇದೇ ಸಮಯದಲ್ಲಿ ಅವರು ಉಲ್ಲೇಖಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…