ನವದೆಹಲಿ: ಅಮೆರಿಕಾ ಕೋರ್ಟ್ನಲ್ಲಿ ಗೌತಮ್ ಅದಾನಿ ವಿರುದ್ಧ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕುರಿತು ಚರ್ಚೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಸಂಸದ ಮಾಣಿಕ್ಯಂ ಟಾಗೋರ್ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅದಾನಿ ವಿಷಯದಲ್ಲಿ ಯಾಕೆ ಮೌನವಹಿಸುತ್ತಿದೆ? ಎಂದು ಪ್ರಶ್ನಿಸಿದ ಅವರು, ಮೋದಿ ಅವರು ಅದಾನಿ ಜೊತೆಗಿನ ಗೆಳೆತನಕ್ಕೆ ಸಂಬಂಧಿಸಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಬೇಕು. ಇದರಿಂದಾಗಿ ಭಾರತದ ಸಮಗ್ರತೆ ಹಾಗೂ ಜಾಗತಿಕ ಸ್ಥಾನಮಾನದ ಬಗ್ಗೆ ಚರ್ಚೆ ಮಾಡಿದಂತೆ ಆಗುತ್ತದೆ ಎಂದು ಆಗ್ರಹಿಸಿದರು.
ಇನ್ನು ಆಂಧ್ರ ಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿ ಸರ್ಕಾರದಲ್ಲಿ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ 1,750 ಕೋಟಿ ಲಂಚ ನೀಡಿದ್ದಾರೆ ಎಂದು ಆರೋಪಿಸಿ, ಆಂಧ್ರದ ಇಂದಿನ ಸರ್ಕಾರ ಎಸ್ಇಸಿಐಯೊಡನೆ ಮಾಡಿಕೊಂಡಿರುವ ಸೌರ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಲು ಚಿಂತನೆ ನಡೆಸುತ್ತಿದೆ. ಈ ಆರೋಪಗಳ ಬಗ್ಗೆ ಕೂಡಲೇ ಚರ್ಚೆ ನಡೆಸಬೇಕು ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.ಹ
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…