ದೇಶ- ವಿದೇಶ

ದೇಶಾದ್ಯಂತ 15 ರಾಜ್ಯಗಳಲ್ಲಿ ಜೈ ಹಿಂದ್‌ ಸಭೆ ನಡೆಸಲು ಕಾಂಗ್ರೆಸ್‌ ಸಜ್ಜು

ಹೊಸದಿಲ್ಲಿ : ಭಾರತೀಯ ಸೈನಿಕರ ಶೌರ್ಯಪರಾಕ್ರಮವನ್ನು ಪ್ರಶಂಶಿಸಲು ಹಾಗೂ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವನ್ನು ಪ್ರಶ್ನಿಸಲು ಕಾಂಗ್ರೆಸ್ ವತಿಯಿಂದ ಬೆಂಗಳೂರು ಸೇರಿದಂತೆ ದೇಶಾದ್ಯಂತ 15 ಕಡೆಗಳಲ್ಲಿ ಜೈ ಹಿಂದ್ ಶಹಬ್ಬಾಸ್ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತಾದ್ಯಂತ ಜೈ ಹಿಂದ್ ಶಹಬ್ಬಾಸ್ ಸಭೆಗಳ ಮೂಲಕ ನಮ್ಮ ವೀರ ಸೈನಿಕರಿಗೆ ಸೆಲ್ಯೂಟ್ ಮಾಡುತ್ತಿದೆ. ಸಶಸ್ತ್ರ ಪಡೆಗಳ ಯಶಸ್ಸನ್ನು ಸಂಭ್ರಮಿಸಲಿದೆ ಎಂದರು.

ಇದೇ ವೇಳೆ ಭದ್ರತಾ ಲೋಪಗಳ ಬಗ್ಗೆ ಪ್ರಸ್ತಾಪಿಸಲಾಗುವುದು. ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ವೈಫಲ್ಯ ಅನುಭವಿಸಿದೆ. ನಮ್ಮ ಆಂತರಿಕ ಭದ್ರತೆ ವಿಚಾರದಲ್ಲಿ ಅಮೆರಿಕ ತಲೆ ಹಾಕಿದ್ದು, ಇದರ ಬಗ್ಗೆ ಕೇಂದ್ರಸರ್ಕಾರದ ಮೌನದ ಕುರಿತು ಪ್ರಶ್ನೆಗಳಿವೆ ಎಂದು ಹೇಳಿದ್ದಾರೆ.

ಮೇ 20 ರಿಂದ 30ರವರೆಗೂ ದೆಹಲಿ, ಬರ್ಮಿರ್, ಶಿಮ್ಲಾ, ಪಾಟ್ನಾ, ಜಬ್ಲಾಪುರ್, ಪುಣೆ, ಗೋವಾ, ಬೆಂಗಳೂರು, ಕೊಚ್ಚಿ, ಗೊವ್ಹಾಟಿ, ಕೋಲ್ಕತ್ತ, ಹೈದ್ರಾಬಾದ್, ಭುವನೇಶ್ವರ್, ಪಟಾನ್‍ಕೋರ್ ನಗರಗಳಲ್ಲಿ ಈ ರ್ಯಾಲಿಗಳು ನಡೆಯಲಿದ್ದು, ಹಿರಿಯ ಸೈನಿಕರು, ಪಕ್ಷದ ನಾಯಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

56 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

2 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago