ದೇಶ- ವಿದೇಶ

ದೇಶಾದ್ಯಂತ 15 ರಾಜ್ಯಗಳಲ್ಲಿ ಜೈ ಹಿಂದ್‌ ಸಭೆ ನಡೆಸಲು ಕಾಂಗ್ರೆಸ್‌ ಸಜ್ಜು

ಹೊಸದಿಲ್ಲಿ : ಭಾರತೀಯ ಸೈನಿಕರ ಶೌರ್ಯಪರಾಕ್ರಮವನ್ನು ಪ್ರಶಂಶಿಸಲು ಹಾಗೂ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವನ್ನು ಪ್ರಶ್ನಿಸಲು ಕಾಂಗ್ರೆಸ್ ವತಿಯಿಂದ ಬೆಂಗಳೂರು ಸೇರಿದಂತೆ ದೇಶಾದ್ಯಂತ 15 ಕಡೆಗಳಲ್ಲಿ ಜೈ ಹಿಂದ್ ಶಹಬ್ಬಾಸ್ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತಾದ್ಯಂತ ಜೈ ಹಿಂದ್ ಶಹಬ್ಬಾಸ್ ಸಭೆಗಳ ಮೂಲಕ ನಮ್ಮ ವೀರ ಸೈನಿಕರಿಗೆ ಸೆಲ್ಯೂಟ್ ಮಾಡುತ್ತಿದೆ. ಸಶಸ್ತ್ರ ಪಡೆಗಳ ಯಶಸ್ಸನ್ನು ಸಂಭ್ರಮಿಸಲಿದೆ ಎಂದರು.

ಇದೇ ವೇಳೆ ಭದ್ರತಾ ಲೋಪಗಳ ಬಗ್ಗೆ ಪ್ರಸ್ತಾಪಿಸಲಾಗುವುದು. ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ವೈಫಲ್ಯ ಅನುಭವಿಸಿದೆ. ನಮ್ಮ ಆಂತರಿಕ ಭದ್ರತೆ ವಿಚಾರದಲ್ಲಿ ಅಮೆರಿಕ ತಲೆ ಹಾಕಿದ್ದು, ಇದರ ಬಗ್ಗೆ ಕೇಂದ್ರಸರ್ಕಾರದ ಮೌನದ ಕುರಿತು ಪ್ರಶ್ನೆಗಳಿವೆ ಎಂದು ಹೇಳಿದ್ದಾರೆ.

ಮೇ 20 ರಿಂದ 30ರವರೆಗೂ ದೆಹಲಿ, ಬರ್ಮಿರ್, ಶಿಮ್ಲಾ, ಪಾಟ್ನಾ, ಜಬ್ಲಾಪುರ್, ಪುಣೆ, ಗೋವಾ, ಬೆಂಗಳೂರು, ಕೊಚ್ಚಿ, ಗೊವ್ಹಾಟಿ, ಕೋಲ್ಕತ್ತ, ಹೈದ್ರಾಬಾದ್, ಭುವನೇಶ್ವರ್, ಪಟಾನ್‍ಕೋರ್ ನಗರಗಳಲ್ಲಿ ಈ ರ್ಯಾಲಿಗಳು ನಡೆಯಲಿದ್ದು, ಹಿರಿಯ ಸೈನಿಕರು, ಪಕ್ಷದ ನಾಯಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

13 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

31 mins ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

5 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

21 hours ago