pm narendra modi (1)
ಉತ್ತರ ಪ್ರದೇಶ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ಈ ಬಗ್ಗೆ ವಾರಣಾಸಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ನಮ್ಮ ಸ್ಥಳೀಯ ಶಸ್ತ್ರಾಸ್ತ್ರಗಳ ಸಾಮರ್ಥ್ಯಗಳನ್ನು ಜಗತ್ತು ಕಂಡಿತು. ನಮ್ಮ ವಾಯು ರಕ್ಷಣಾ ವ್ಯವಸ್ಥೆಗಳು, ಕ್ಷಿಪಣಿಗಳು ಮತ್ತು ವಿಶೇಷವಾಗಿ ಬ್ರಹ್ಮೋಸ್ ಕ್ಷಿಪಣಿಗಳು ಯಶಸ್ವಿಯಾಗಿ ಕಾರ್ಯಾಚರಣೆ ಕೈಗೊಂಡಿದ್ದವು. ಈಗ ಬ್ರಹ್ಮೋಸ್ ಕ್ಷಿಪಣಿಗಳನ್ನು ಲಕ್ನೋದಲ್ಲಿ ತಯಾರಿಸಲಾಗುವುದು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಪಾಕಿಸ್ತಾನ ಅಸಮಾಧಾನಗೊಂಡಿದೆ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಪಾಕಿಸ್ತಾನ ಅನುಭವಿಸುತ್ತಿರುವ ನೋವನ್ನು ಸಹಿಸಲಾರವು. ಪಾಕಿಸ್ತಾನ ಅಳುತ್ತಿದೆ. ಇಲ್ಲಿ ಕಾಂಗ್ರೆಸ್ ಮತ್ತು ಎಸ್ಪಿ ಪಕ್ಷವು ಭಯೋತ್ಪಾದಕರ ಸ್ಥಿತಿಯನ್ನು ನೋಡಿ ಅಳುತ್ತಿವೆ. ಕಾಂಗ್ರೆಸ್ ನಮ್ಮ ಪಡೆಗಳ ಶೌರ್ಯವನ್ನು ನಿರಂತರವಾಗಿ ಅವಮಾನಿಸುತ್ತಿದೆ ಎಂದು ಕಿಡಿಕಾರಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…