ದೇಶ- ವಿದೇಶ

Exit polls ಕುರಿತ ಚರ್ಚೆಗಳಲ್ಲಿ ಕಾಂಗ್ರೆಸ್‌ ಭಾಗವಹಿಸುವುದಿಲ್ಲ: ಪವನ್‌ ಖೇರಾ

ನವದೆಹಲಿ: ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ ಇಂದು ಮುಕ್ತಾಯಗೊಳ್ಳಲಿದ್ದು, ಇದಾದ ಬಳಿಕ ಯಾವುದೇ ಸುದ್ದಿ ವಾಹಿನಿಗಳಲ್ಲಿ ನಡೆಯಲಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ.

ಟಿಆರ್‌ಪಿಗಾಗಿ ಹಾಗೂ ಕೆಸರೆರಚಾಟದ ಚರ್ಚೆಗಳಲ್ಲಿ ಪಾಲ್ಗೊಳ್ಳಲು ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ, ಈಗಾಗಲೇ ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದು, ಅವರ ತೀರ್ಪು ಮತಪೆಟ್ಟಿಗೆಯಲ್ಲಿ ಸುರಕ್ಷಿತವಾಗಿದೆ. ಈ ಸಂಬಂಧ ಜೂನ್‌.4 ರಂದು ಫಲಿತಾಂಶ ಹೊರ ಬೀಳಲಿದ್ದು, ಅದಕ್ಕು ಮುನ್ನಾ ಟಿಆರ್‌ಪಿಗಾಗಿ ಮಾಧ್ಯಮಗಳು ನಡೆಸುವ ಚುನಾವಣೋತ್ತರ ಸಮೀಕ್ಷೆಯಲ್ಲಿ ನಾವು ಭಾಗವಹಿಸುವುದಿಲ್ಲ. ಇದಕ್ಕಾಗಿ ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಬರೆದುಕೊಂಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಭಾಗವಹಿಸುವುದಿಲ್ಲ. ಯಾವುದೇ ಚರ್ಚೆಯಾದರು ಅದು ಜನರಿಗೆ ಚರ್ಚೆಯ ವಿಷಯನ್ನೇ ತಿಳಿಸುವುದು ಆಗಿರಬೇಕು. ಜೂನ್‌.4ರ ಬಳಿಕ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಹವಹಿಸಲಿದ್ದೇವೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

50 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

54 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

59 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

1 hour ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

1 hour ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

1 hour ago