ನವದೆಹಲಿ: ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ ಇಂದು ಮುಕ್ತಾಯಗೊಳ್ಳಲಿದ್ದು, ಇದಾದ ಬಳಿಕ ಯಾವುದೇ ಸುದ್ದಿ ವಾಹಿನಿಗಳಲ್ಲಿ ನಡೆಯಲಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಟಿಆರ್ಪಿಗಾಗಿ ಹಾಗೂ ಕೆಸರೆರಚಾಟದ ಚರ್ಚೆಗಳಲ್ಲಿ ಪಾಲ್ಗೊಳ್ಳಲು ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ಈಗಾಗಲೇ ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದು, ಅವರ ತೀರ್ಪು ಮತಪೆಟ್ಟಿಗೆಯಲ್ಲಿ ಸುರಕ್ಷಿತವಾಗಿದೆ. ಈ ಸಂಬಂಧ ಜೂನ್.4 ರಂದು ಫಲಿತಾಂಶ ಹೊರ ಬೀಳಲಿದ್ದು, ಅದಕ್ಕು ಮುನ್ನಾ ಟಿಆರ್ಪಿಗಾಗಿ ಮಾಧ್ಯಮಗಳು ನಡೆಸುವ ಚುನಾವಣೋತ್ತರ ಸಮೀಕ್ಷೆಯಲ್ಲಿ ನಾವು ಭಾಗವಹಿಸುವುದಿಲ್ಲ. ಇದಕ್ಕಾಗಿ ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಬರೆದುಕೊಂಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಯಾವುದೇ ಚರ್ಚೆಯಾದರು ಅದು ಜನರಿಗೆ ಚರ್ಚೆಯ ವಿಷಯನ್ನೇ ತಿಳಿಸುವುದು ಆಗಿರಬೇಕು. ಜೂನ್.4ರ ಬಳಿಕ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಹವಹಿಸಲಿದ್ದೇವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…