ನವದೆಹಲಿ: ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ ಇಂದು ಮುಕ್ತಾಯಗೊಳ್ಳಲಿದ್ದು, ಇದಾದ ಬಳಿಕ ಯಾವುದೇ ಸುದ್ದಿ ವಾಹಿನಿಗಳಲ್ಲಿ ನಡೆಯಲಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಟಿಆರ್ಪಿಗಾಗಿ ಹಾಗೂ ಕೆಸರೆರಚಾಟದ ಚರ್ಚೆಗಳಲ್ಲಿ ಪಾಲ್ಗೊಳ್ಳಲು ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ಈಗಾಗಲೇ ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದು, ಅವರ ತೀರ್ಪು ಮತಪೆಟ್ಟಿಗೆಯಲ್ಲಿ ಸುರಕ್ಷಿತವಾಗಿದೆ. ಈ ಸಂಬಂಧ ಜೂನ್.4 ರಂದು ಫಲಿತಾಂಶ ಹೊರ ಬೀಳಲಿದ್ದು, ಅದಕ್ಕು ಮುನ್ನಾ ಟಿಆರ್ಪಿಗಾಗಿ ಮಾಧ್ಯಮಗಳು ನಡೆಸುವ ಚುನಾವಣೋತ್ತರ ಸಮೀಕ್ಷೆಯಲ್ಲಿ ನಾವು ಭಾಗವಹಿಸುವುದಿಲ್ಲ. ಇದಕ್ಕಾಗಿ ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ಬರೆದುಕೊಂಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಯಾವುದೇ ಚರ್ಚೆಯಾದರು ಅದು ಜನರಿಗೆ ಚರ್ಚೆಯ ವಿಷಯನ್ನೇ ತಿಳಿಸುವುದು ಆಗಿರಬೇಕು. ಜೂನ್.4ರ ಬಳಿಕ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಹವಹಿಸಲಿದ್ದೇವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…