ಚಂಡೀಘಡ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಸೂಟ್ಕೇಸ್ನಲ್ಲಿ ಪತ್ತೆಯಾಗಿದ್ದಾರೆ.
ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.
ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್ಕೇಸ್ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ.
ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹಕ್ ಪಿಜಿಐಎಂಎಸ್ಗೆ ರವಾನಿಸಲಾಗಿದೆ.
ಹಿಮಾನಿ ನರ್ವಾಲ್ ಅವರು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು, ಎಸ್ಐಟಿ ತನಿಖೆಗೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…