ದೇಶ- ವಿದೇಶ

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆ ಮೃತದೇಹ ಪತ್ತೆ

ಚಂಡೀಘಡ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದಾರೆ.

ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.

ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್‌ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ.

ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.

ಹಿಮಾನಿ ನರ್ವಾಲ್ ಅವರು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು, ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

58 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

1 hour ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

6 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

22 hours ago