ದೇಶ- ವಿದೇಶ

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆ ಮೃತದೇಹ ಪತ್ತೆ

ಚಂಡೀಘಡ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದಾರೆ.

ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.

ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್‌ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ.

ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.

ಹಿಮಾನಿ ನರ್ವಾಲ್ ಅವರು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು, ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago