ದೇಶ- ವಿದೇಶ

ಮಣಿಪುರದಲ್ಲಿ ಮತದಾನದ ವೇಳೆ ಅಕ್ರಮ ಆರೋಪ; ಮರು ಮತದಾನಕ್ಕೆ ಕಾಂಗ್ರೆಸ್‌ ಆಗ್ರಹ

ಮಣಿಪುರ: 2024 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 102 ಕ್ಷೇತ್ರಗಳಿಗೆ ಶುಕ್ರವಾರ ನಡೆದಿದೆ. ಅದರಲ್ಲಿ ಮಣಿಪುರದ ಎರಡು ಲೋಕಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆ ಕ್ಷೆತ್ರ ವ್ಯಾಪ್ತಿಯ 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್‌ ಆಗ್ರಹಿಸಿದೆ.

ಮಣಿಪುರದ ಇನ್ನರ್‌ ಮಣಿಪುರ ಮತ್ತು ಔಟರ್‌ ಮಣಿಪುರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆಯ ಬಳಿ ಅಪರಿಚಿತರು ಗುಂಡಿನ ದಾಳಿ, ಬೆದರಿಸುವುದು, ಮತಯಂತ್ರಗಳಿಗೆ ಹಾನಿ ಉಂಟುಮಾಡುವುದು ಮಾಡಿದ್ದರು.

ಈ ಬಗ್ಗೆ ಮಣಿಪುರದ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ಮೇಘಚಂದ್ರ ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಇನ್ನರ್‌ ಮಣಿಪುರದ 36 ಮತಗಟ್ಟೆಗಳು ಹಾಗೂ ಔಟರ್‌ ಮಣಿಪುರದ 11 ಮತಗಟ್ಟೆಗಳಿಗೆ ಮರು ಮತದಾನ ನಡೆಸುವಂತೆ ಕೋರಿ ಚುನಾವಣೆ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

2 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

4 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago