ನವದೆಹಲಿ: ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ದೇಶದ ಜನರು ಸಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಸಂವಿಧಾನ ದಿನದಂದು ದೇಶದ ನಿವಾಸಿಗಳನ್ನು ಉದ್ದೇಶಿಸಿ ಪತ್ರ ಬರೆದಿರುವ ಅವರು, ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಜವಾಬ್ದಾರಿಯನ್ನು ಪೂರೈಸಬೇಕು. 18 ವರ್ಷ ತುಂಬಿದ ಯುವ ಮತದಾರರನ್ನು ಗೌರವಿಸುವ ಮೂಲಕ ಶಾಲಾ ಮತ್ತು ಕಾಲೇಜುಗಳು ಸಂವಿಧಾನ ದಿನವನ್ನು ಆಚರಣೆ ಮಾಡಬೇಕು ಎಂದು ಕರೆ ನೀಡಿದರು.
ಇದನ್ನು ಓದಿ : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯ
ಇಂದು ನಾವೆಲ್ಲಾ ತೆಗೆದುಕೊಳ್ಳುವ ನೀತಿಗಳು ಹಾಗೂ ನಿರ್ಧಾರಗಳು ಮುಂದಿನ ಪೀಳಿಗೆಯ ಜೀವನವನ್ನು ರೂಪಿಸುತ್ತವೆ. ಭಾರತವು ವಿಕಸಿತ ಭಾರತದ ದೃಷ್ಟಿಕೋನದತ್ತ ಸಾಗುತ್ತಿದ್ದು, ನಾಗರಿಕರು ತಮ್ಮ ಕರ್ತವ್ಯಗಳನ್ನು ಪ್ರಮುಖವಾಗಿ ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂವಿಧಾನವು ನನ್ನಂತೆಯೇ ಹಲವರಿಗೆ ಕನಸು ಕಾಣುವ ಶಕ್ತಿ ಮತ್ತು ಅದರ ಕಡೆಗೆ ಕೆಲಸ ಮಾಡುವ ಬಲವನ್ನು ನೀಡಿದೆ. ತಮ್ಮಂತಹ ವ್ಯಕ್ತಿಯೊಬ್ಬರು 14 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲು ಸಂವಿಧಾನದ ಶಕ್ತಿಯೇ ಕಾರಣ ಎಂದು ತಿಳಿಸಿದರು.
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…