ದೇಶ- ವಿದೇಶ

ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ದೇಶದ ಜನರು ಸಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಂವಿಧಾನ ದಿನದಂದು ದೇಶದ ನಿವಾಸಿಗಳನ್ನು ಉದ್ದೇಶಿಸಿ ಪತ್ರ ಬರೆದಿರುವ ಅವರು, ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಜವಾಬ್ದಾರಿಯನ್ನು ಪೂರೈಸಬೇಕು. 18 ವರ್ಷ ತುಂಬಿದ ಯುವ ಮತದಾರರನ್ನು ಗೌರವಿಸುವ ಮೂಲಕ ಶಾಲಾ ಮತ್ತು ಕಾಲೇಜುಗಳು ಸಂವಿಧಾನ ದಿನವನ್ನು ಆಚರಣೆ ಮಾಡಬೇಕು ಎಂದು ಕರೆ ನೀಡಿದರು.

ಇದನ್ನು ಓದಿ : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯ

ಇಂದು ನಾವೆಲ್ಲಾ ತೆಗೆದುಕೊಳ್ಳುವ ನೀತಿಗಳು ಹಾಗೂ ನಿರ್ಧಾರಗಳು ಮುಂದಿನ ಪೀಳಿಗೆಯ ಜೀವನವನ್ನು ರೂಪಿಸುತ್ತವೆ. ಭಾರತವು ವಿಕಸಿತ ಭಾರತದ ದೃಷ್ಟಿಕೋನದತ್ತ ಸಾಗುತ್ತಿದ್ದು, ನಾಗರಿಕರು ತಮ್ಮ ಕರ್ತವ್ಯಗಳನ್ನು ಪ್ರಮುಖವಾಗಿ ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂವಿಧಾನವು ನನ್ನಂತೆಯೇ ಹಲವರಿಗೆ ಕನಸು ಕಾಣುವ ಶಕ್ತಿ ಮತ್ತು ಅದರ ಕಡೆಗೆ ಕೆಲಸ ಮಾಡುವ ಬಲವನ್ನು ನೀಡಿದೆ. ತಮ್ಮಂತಹ ವ್ಯಕ್ತಿಯೊಬ್ಬರು 14 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲು ಸಂವಿಧಾನದ ಶಕ್ತಿಯೇ ಕಾರಣ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago