ದೇಶ- ವಿದೇಶ

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ ರೂ.2.61 ಹಾಗೂ ಡೀಸೆಲ್ ದರವನ್ನು ರೂ.2.71 ಹೆಚ್ಚಿಸಲಾಗಿದ್ದು, ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿ ನಡೆದ ದರ ಏರಿಕೆಯಾಗಿದೆ.

ಪೆಟ್ರೋಲ್‍ಗೆ 2.83 ರೂ, ಹಾಗೂ ಡೀಸೆಲ್ ಗೆ 2.81 ರೂ ಹೆಚ್ಚಳ ಆಗಿದೆ. ಹೀಗಾಗಿ ಪೆಟ್ರೋಲ್ ಬೆಲೆ 110.89 ರೂ,ಡೀಸೆಲ್‍ಗೆ 98.80 ರೂ ತಲುಪಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ಬೆಲೆ 111.19 ರೂ ಹಾಗೂ ಡೀಸೆಲ್ ಬೆಲೆ 99.08 ರೂ ದಾಖಲಾಗಿದೆ.
ಈ ವರೆಗೆ ಒಟ್ಟು ಪೆಟ್ರೋಲ್ ಡೀಸೆಲ್ ಲೀಟರ್ ಬೆಲೆಯಲ್ಲಿ 7 ರೂಪಾಯಿಗೂ ಹೆಚ್ಚು ಬೆಲೆ ಏರಕೆ ಕಂಡಿದೆ. ದೆಹಲಿಯಲ್ಲೀಗ ಪೆಟ್ರೋಲ್ ದರ 102.12 ರೂ, ಡೀಸೆಲ್ ಗೆ 95.20 ರೂ ಹೆಚ್ಚಳ ಆಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹಾಗೂ ಸ್ಥಳೀಯ ಮೌಲ್ಯವರ್ಧಿತ ತೆರಿಗೆ ರಾಜ್ಯದಿಂದ ರಾಜ್ಯಕ್ಕೆ ಬದಲಾಗುವುದರಿಂದ ವಿವಿಧ ನಗರಗಳಲ್ಲಿ ಇಂಧನ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ದೈನಂದಿನ ಬೆಲೆ ಪರಿಷ್ಕರಣೆ ನೀತಿಯ ಅಡಿಯಲ್ಲಿ, ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ ಇಂಧನ ದರಗಳನ್ನು ನವೀಕರಿಸುತ್ತವೆ.

ಸತತ ನಾಲ್ಕನೇ ಬಾರಿಗೆ ಬೆಲೆ ಏರಿಕೆಯಾಗಿರುವುದು ಸಾರಿಗೆ ವಲಯದ ಮೇಲೂ ನೇರ ಪರಿಣಾಮ ಬೀರಲಿದ್ದು, ಸರಕು ಸಾಗಣೆ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ತರಕಾರಿ ಹಾಗೂ ದಿನಸಿ ವಸ್ತುಗಳ ಬೆಲೆಯೂ ದುಬಾರಿಯಾಗುವ ಭೀತಿ ಜನಸಾಮಾನ್ಯರನ್ನು ಕಾಡುತ್ತಿದೆ. ತೈಲ ಬೆಲೆ ಇಳಿಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಕೂಗು ಸಾರ್ವಜನಿಕ ವಲಯದಲ್ಲಿ ಜೋರಾಗಿದೆ.

ಅಮೆರಿಕ- ಇರಾನ್ ಸಂಗರ್ಷದಿಂದಾಗಿ, ಹರ್ಮುಜ್ ಬಿಕ್ಕಟ್ಟಿನಿಂದ ಕಚ್ಚಾತೈಲ ದರ ಏರಿಕೆ, ಹಣದುಬ್ಬರದ ಸ್ಥಿತಿ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ಆಮದು ವೆಚ್ಚ ಹೆಚ್ಚಳ ಆಗಿರುವ ಕಾರಣಕ್ಕೆ, ದೇಶದಲ್ಲಿ ಪೆಟ್ರೋಲ್ ಡೀಶೆಲ್ ಬೆಲೆ ಸತತವಾಗಿ ಏರಿಕೆ ಕಂಡಿದೆ. ಈ ವರೆಗೂ 7 ರೂಪಾಯಿಗೂ ಹೆಚ್ಚು ಏರಿಕೆಯಾಗಿದೆ. ಈ ನಿರಂತರ ಬೆಲೆ ಏರಿಕೆಯು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದು, ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗುವ ಆತಂಕವನ್ನು ಸೃಷ್ಟಿಸಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‍ಗೆ 102.12 ರೂ. ತಲುಪಿದ್ದರೆ, ಡೀಸೆಲ್ ದರ ಲೀಟರ್‍ಗೆ 95.20 ರೂ.ಗೆ ಮಾರಾಟವಾಗುತ್ತಿದೆ. ರಾಜ್ಯದ ವಿವಿಧೆಡೆ ಇರುವ ಪೆಟ್ರೋಲ್ ಬಂಕ್ ಹೊಸ ದರಗಳು ಈಗಾಗಲೇ ಜಾರಿಗೆ ಬಂದಿದ್ದು, ಬೆಲೆ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿನ ಏರಿಳಿತಗಳೇ ಈ ಸತತ ದರ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.

ಮೇ 15ರಂದು ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಲಾ ರೂ.3ರಷ್ಟು ಹೆಚ್ಚಿಸಲಾಗಿತ್ತು. ಬಳಿಕ ಮೇ 19ರಂದು ಸುಮಾರು 90 ಪೈಸೆ ಏರಿಕೆ ಮಾಡಲಾಗಿತ್ತು. ಮೇ 23ರಂದು ಮತ್ತೆ ಪೆಟ್ರೋಲ್‍ಗೆ 87 ಪೈಸೆ ಮತ್ತು ಡೀಸೆಲ್‍ಗೆ 91 ಪೈಸೆ ಹೆಚ್ಚಳವಾಗಿತ್ತು.

ಇಂಧನ ದರ ಏರಿಕೆಯಿಂದ ಸರಕು ಸಾಗಣೆ, ಕ್ಯಾಬ್, ಬಸ್, ಕೃಷಿ ಹಾಗೂ ದಿನನಿತ್ಯದ ವಸ್ತುಗಳ ಬೆಲೆಯ ಮೇಲೂ ನೇರ ಪರಿಣಾಮ ಬೀರುತ್ತಿದೆ.ಈಗಿನ ಹೊಸ ಏರಿಕೆಯಿಂದ ಎರಡು ವಾರಗಳ ಅವಧಿಯಲ್ಲಿ ಜನರ ಮೇಲೆ ಭಾರೀ ಹೊರೆ ಬಿದ್ದಂತಾಗಿದೆ. ಹಲವು ತಿಂಗಳುಗಳ ಕಾಲ ಸ್ಥಿರವಾಗಿದ್ದ ಇಂಧನ ದರಗಳು ಏಕಾಏಕಿ ನಿರಂತರವಾಗಿ ಏರಿಕೆಯಾಗುತ್ತಿರುವುದು ವಾಹನ ಸವಾರರು ಮತ್ತು ಮಧ್ಯಮ ವರ್ಗದ ಜನರಿಗೆ ಸಂಕಷ್ಟ ತಂದೊಡ್ಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯೇ ಇದಕ್ಕೆ ಪ್ರಮುಖ ಕಾರಣವೆಂದು ತೈಲ ಕಂಪನಿಗಳು ಹೇಳುತ್ತಿವೆ. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ, ಅಮೆರಿಕಾ ಮತ್ತು ಇಸ್ರೇಲ್ ದಾಳಿಗಳ ನಂತರ ಇರಾನ್ ಸುತ್ತಲಿನ ರಾಜಕೀಯ ಮತ್ತು ಯುದ್ಧ ಭೀತಿ, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಗೆ ಉಂಟಾದ ಅಡಚಣೆ ಇವೆಲ್ಲವೂ ಕಚ್ಚಾ ತೈಲದ ಬೆಲೆಯನ್ನು ಹೆಚ್ಚಿಸಿವೆ.

ಫೆಬ್ರವರಿ ಅಂತ್ಯದಿಂದ ಜಾಗತಿಕ ಕಚ್ಚಾ ತೈಲದ ದರವು 50 ಶೇಕಡಕ್ಕಿಂತ ಹೆಚ್ಚು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ಇದರ ಜೊತೆಗೆ ರೂಪಾಯಿ ಮೌಲ್ಯ ಕುಸಿತ ಭಾರತಕ್ಕೆ ತೈಲ ಆಮದು ವೆಚ್ಚವನ್ನು ಹೆಚ್ಚಿಸಿದೆ.

ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳ ಚುನಾವಣಾ ಫಲಿತಾಂಶಗಳ ನಂತರವೇ ದರ ಪರಿಷ್ಕರಣೆ ಆರಂಭವಾದ ಕಾರಣ ರಾಜಕೀಯ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗಿವೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಮುಂದಿನ ದಿನಗಳಲ್ಲಿ ಬಸ್, ಆಟೋ, ಟ್ಯಾಕ್ಸಿ ದರಗಳೂ ಏರಬಹುದಾದ ಸಾಧ್ಯತೆ ಇದೆ. ಸರಕು ಸಾಗಣೆ ವೆಚ್ಚ ಹೆಚ್ಚಾದರೆ ತರಕಾರಿ, ಹಣ್ಣು, ದಿನಸಿ ಸೇರಿದಂತೆ ಸಾಮಾನ್ಯ ಬಳಕೆಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ದುಬಾರಿ ಜೀವನದಿಂದ ಬಳಲುತ್ತಿರುವ ಜನರಿಗೆ ಈ ಇಂಧನ ದರ ಏರಿಕೆ ಮತ್ತೊಂದು ದೊಡ್ಡ ಹೊರೆ ಆಗಿದೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

35 mins ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

2 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

4 hours ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

21 hours ago