ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಅವರೊಂದಿಗೆ ಸಂಪರ್ಕ ಮತ್ತು ಸಾರ್ವಜನಿಕ ಹುದ್ದೆಯ ದುರುಪಯೋಗದ ಆರೋಪದಡಿ ಥೇಮ್ಸ್ ವ್ಯಾಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಈ ಆರೋಪವು ಗಂಭೀರವಾಗಿದ್ದು, ಜೀವಾವಧಿ ಶಿಕ್ಷೆಯವರೆಗೆ ಶಿಕ್ಷೆಯಾಗಬಹುದು ಎಂದು ಹೇಳಲಾಗಿದೆ. ಜೊತೆಗೆ ಬ್ರಿಟನ್ನ ಬಕಿಂಗ್ಹ್ಯಾಮ್ ಅರಮನೆಯಿಂದ ಅವರನ್ನು ಹೊರಹಾಕಲಾಗಿದೆ.
ಎಪ್ಸ್ಟೀನ್ ಫೈಲ್ಸ್ನ ಮಾಹಿತಿಗಳ ಪ್ರಕಾರ, ಆ್ಯಂಡ್ರೂ ಅವರು UK ಟ್ರೇಡ್ ಎನ್ವಾಯ್ ಆಗಿದ್ದಾಗ ರಹಸ್ಯ ಸರ್ಕಾರಿ ದಾಖಲೆಗಳನ್ನು ಎಪ್ಸ್ಟೀನ್ಗೆ ಹಂಚಿಕೊಂಡಿರುವ ಶಂಕೆಯಿದೆ. ಇದಲ್ಲದೆ, ಲೈಂಗಿಕ ದುಷ್ಕೃತ್ಯದ ಆರೋಪಗಳು ಹಿಂದಿನಿಂದಲೂ ಇದ್ದವು, ಆದರೆ ಅವರು ಎಲ್ಲವನ್ನೂ ನಿರಾಕರಿಸಿದ್ದರು. ಇದೀಗ ಅಂತಿಮವಾಗಿ ಆ್ಯಂಡ್ರೂ ಅವರನ್ನು ಬಂಧಿಸಲಾಗಿದೆ.
ಆ್ಯಂಡ್ರೂ ಅವರ ರಾಜಕುಮಾರ ಬಿರುದುಗಳನ್ನು ಕಿತ್ತುಹಾಕಲಾಗಿತ್ತು. ತನಿಖೆ ಮುಂದುವರೆದಿದ್ದು, ಬರ್ಕ್ಶೈರ್ ಮತ್ತು ನಾರ್ಫೋಕ್ನಲ್ಲಿರುವ ಅವರ ವಸತಿಗಳಲ್ಲಿ ಶೋಧ ನಡೆಯುತ್ತಿದೆ. ಇದು ಬ್ರಿಟಿಷ್ ರಾಜಮನೆತನಕ್ಕೆ ದೊಡ್ಡ ಆಘಾತ, ಮತ್ತು ಅಪರೂಪದ ಘಟನೆಯಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೆ ಬಹಿರಂಗವಾಗಬೇಕಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…