ನವದೆಹಲಿ: ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ದಟ್ಟ ಮಂಜು ಆವರಿಸಿಕೊಂಡಿದ್ದು, ವಿಮಾನ ಮತ್ತು ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸತತ ಮೂರು ದಿನಗಳಿಂದ ಮಂಜು ಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಇಂದು(ಜನವರಿ.5) ಸುಮಾರು 45ಕ್ಕೂ ಅಧಿಕ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಅಲ್ಲದೇ 50ಕ್ಕೂ ಹೆಚ್ಚು ರೈಲುಗಳು ನಿಧಾನಗತಿಯಲ್ಲಿ ಸಂಚರಿಸಿವೆ.
ಕೆಲ ದಿನಗಳಿಂದ ದೆಹಲಿಯ ವಾಯುಮಾಲಿನ್ಯದಿಂದ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟದಲ್ಲಿದೆ. ಇಂದು ಬೆಳಿಗ್ಗೆ 9 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ(AQI) 372 ಇದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶ ವರದಿ ನೀಡಿದೆ.
ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದ ಕಾರಣ ನಿನ್ನೆ(ಜ.4) 19 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು. ಅಲ್ಲದೇ ಸುಮಾರು 400 ವಿಮಾನಗಳ ಹಾರಾಟ ತಡವಾಗಿದೆ. ಹವಾಮಾನದ ಪರಿಣಾಮ 45ಕ್ಕೂ ಅಧಿಕ ವಿಮಾನಗಳ ಹಾರಾಟ ಸ್ಥಗಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…