ದೇಶ- ವಿದೇಶ

ದೆಹಲಿಯಲ್ಲಿ ಸತತ ದಟ್ಟ ಮಂಜು: ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ದಟ್ಟ ಮಂಜು ಆವರಿಸಿಕೊಂಡಿದ್ದು, ವಿಮಾನ ಮತ್ತು ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸತತ ಮೂರು ದಿನಗಳಿಂದ ಮಂಜು ಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಇಂದು(ಜನವರಿ.5) ಸುಮಾರು 45ಕ್ಕೂ ಅಧಿಕ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಅಲ್ಲದೇ 50ಕ್ಕೂ ಹೆಚ್ಚು ರೈಲುಗಳು ನಿಧಾನಗತಿಯಲ್ಲಿ ಸಂಚರಿಸಿವೆ.

ಕೆಲ ದಿನಗಳಿಂದ ದೆಹಲಿಯ ವಾಯುಮಾಲಿನ್ಯದಿಂದ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟದಲ್ಲಿದೆ. ಇಂದು ಬೆಳಿಗ್ಗೆ 9 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ(AQI) 372 ಇದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶ ವರದಿ ನೀಡಿದೆ.

ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದ ಕಾರಣ ನಿನ್ನೆ(ಜ.4) 19 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು. ಅಲ್ಲದೇ ಸುಮಾರು 400 ವಿಮಾನಗಳ ಹಾರಾಟ ತಡವಾಗಿದೆ. ಹವಾಮಾನದ ಪರಿಣಾಮ 45ಕ್ಕೂ ಅಧಿಕ ವಿಮಾನಗಳ ಹಾರಾಟ ಸ್ಥಗಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

6 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

7 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

7 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

9 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

9 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

9 hours ago