ದೇಶ- ವಿದೇಶ

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌ ನಲುಗಿ ಹೋಗಿದೆ.

ಆದರೂ ಕಂಗೆಡದ ಇರಾನ್‌ ದೇಶ ಇಸ್ರೇಲ್‌ ಹಾಗೂ ಅಮೇರಿಕಾದ ಹಲವು ಪ್ರದೇಶಗಳ ಮೇಲೆ ಪ್ರತಿಯಾಗಿ ದಾಳಿ ನಡೆಸುತ್ತಿದ್ದು, ನಾವು ಯಾರಿಗೂ ಬಗ್ಗಲ್ಲ ಎಂಬ ಸಂದೇಶ ರವಾನೆ ಮಾಡುತ್ತಿದೆ.

ಈ ಮಧ್ಯೆ ಇರಾನ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡಿದ್ದು, ತೈಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಜೊತೆಗೆ ಹಾರ್ಮುಜ್ ಜಲಸಂಧಿಯ ಸಮುದ್ರದಡಿ ಜಗತ್ತಿನ ಬಹುತೇಕ ಇಂಟರ್ನೆಟ್ ಸಂಚಾರವನ್ನು ಸಾಗಿಸುವ ದೊಡ್ಡ ಪ್ರಮಾಣದ ಸಬ್‌ಮರಿನ್ ಫೈಬರ್-ಆಪ್ಟಿಕ್ ಕೇಬಲ್‌ಗಳ ಜಾಲವಿದೆ. ಈ ಕೇಬಲ್‌ಗಳು ಏಷ್ಯಾ, ಯುರೋಪ್ ಮತ್ತು ಪಶ್ಚಿಮ ಏಷ್ಯಾವನ್ನು ಸಂಪರ್ಕಿಸುತ್ತವೆ ಮತ್ತು ಹಣಕಾಸು ವ್ಯವಹಾರಗಳು, ವಿಡಿಯೋ ಕರೆಗಳು ಹಾಗೂ ಕ್ಲೌಡ್ ಕಂಪ್ಯೂಟಿಂಗ್ ಸೇರಿದಂತೆ ಅನೇಕ ಡಿಜಿಟಲ್ ಸೇವೆಗಳನ್ನು ಸಾಗಿಸುತ್ತವೆ.‌

ಭಾರತದ ಅಂತರರಾಷ್ಟ್ರೀಯ ಡೇಟಾ ಸಂಚಾರದ ದೊಡ್ಡ ಭಾಗ ಈ ಮಾರ್ಗದ ಸಮೀಪದಿಂದಲೇ ಸಾಗುತ್ತದೆ. ಈ ಪ್ರದೇಶದಲ್ಲಿ ಉದ್ವಿಗ್ನತೆ ಅಥವಾ ಸೈನಿಕ ಚಟುವಟಿಕೆಗಳಿಂದ ಅಡಚಣೆ ಉಂಟಾದರೆ ಹಲವಾರು ಕೇಬಲ್ ವ್ಯವಸ್ಥೆಗಳು ಹಾನಿಗೊಳಗಾಗುವ ಅಥವಾ ಅವುಗಳ ದುರಸ್ತಿ ವಿಳಂಬವಾಗುವ ಸಾಧ್ಯತೆ ಎದ್ದು ಕಾಣುತ್ತಿದೆ. ಇಂಟರ್ನೆಟ್ ಸಂಪೂರ್ಣವಾಗಿ ಸ್ಥಗಿತಗೊಳ್ಳುವುದಿಲ್ಲ. ಆದರೆ ಸಂಚಾರ ದಟ್ಟಣೆ ಹೆಚ್ಚಾಗಿ ಅಂತರರಾಷ್ಟ್ರೀಯ ಸೇವೆಗಳ ವೇಗ ಕಡಿಮೆಯಾಗಬಹುದು.

ಜಾಗತಿಕ ಡಿಜಿಟಲ್ ಆರ್ಥಿಕತೆ ವೇಗವಾಗಿ ವಿಸ್ತರಿಸುತ್ತಿರುವ ಈ ಕಾಲದಲ್ಲಿ, ಸಮುದ್ರದಡಿ ಇರುವ ಈ ಡೇಟಾ ಮಾರ್ಗಗಳನ್ನು ರಕ್ಷಿಸುವುದು ಎನರ್ಜಿ ಸರಬರಾಜು ಮಾರ್ಗಗಳನ್ನು ರಕ್ಷಿಸುವಷ್ಟು ಮಹತ್ವ ಪಡೆದಿದೆ.

ಒಂದು ವೇಳೆ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದರೆ ಇದರ ಪರಿಣಾಮವನ್ನು ಇತರ ದೇಶಗಳು ಅನುಭವಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago