ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ ಸಂಸ್ಕರಣಾ ಕೇಂದ್ರಗಳನ್ನೇ ಗುರಿಯಾಗಿಸಿಕೊಂಡು ಇರಾನ್ ಭೀಕರ ಡ್ರೋನ್ ದಾಳಿ ನಡೆಸಿದೆ.
ದಿನಕ್ಕೆ ಸುಮಾರು 730,000 ಬ್ಯಾರೆಲ್ ತೈಲವನ್ನು ಸಂಸ್ಕರಿಸಬಲ್ಲ ಸಂಸ್ಕರಣಾಗಾರವು ಮತ್ತೊಂದು ಇರಾನಿನ ದಾಳಿಯಲ್ಲಿ ಹಾನಿಗೊಳಗಾಗಿದೆ. ಇದು ಪರ್ಷಿಯನ್ ಕೊಲ್ಲಿಯ ಸಣ್ಣ, ತೈಲ-ಸಮೃದ್ಧ ರಾಷ್ಟ್ರವಾದ ಕುವೈತ್ನಲ್ಲಿರುವ ಮೂರು ತೈಲ ಸಂಸ್ಕರಣಾಗಾರಗಳಲ್ಲಿ ಒಂದಾಗಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರುಪೇರಾಗುವ ಸಾಧ್ಯತೆ ಇದೆ.
ಇರಾನ್ ಈಗಾಗಲೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ, ಸೌದಿ ಅರೇಬಿಯಾವು ತನ್ನ ತೈಲ ರಫ್ತಿಗಾಗಿ ಯಾನ್ಬು ಮತ್ತು ಫುಜೈರಾ ಬಂದರುಗಳನ್ನೇ ಹೆಚ್ಚಾಗಿ ಅವಲಂಬಿಸಿತ್ತು. ಆದರೆ, ಇರಾನ್ ಈಗ ಈ ಪರ್ಯಾಯ ಮಾರ್ಗಗಳನ್ನೂ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ನಿರಂತರ ದಾಳಿಯ ಪರಿಣಾಮವಾಗಿ ಫುಜೈರಾ ಘಟಕದಲ್ಲಿ ಈಗಾಗಲೇ ತೈಲ ಉತ್ಪಾದನೆ ಮತ್ತು ಸಂಸ್ಕರಣಾ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ದಾಳಿಗೂ ಮುನ್ನವೇ ಇರಾನ್ ಕಠಿಣ ಎಚ್ಚರಿಕೆ ನೀಡಿತ್ತು. ಸೌದಿ ಅರೇಬಿಯಾ, ಕತಾರ್ ಮತ್ತು ಯುಎಇ ವ್ಯಾಪ್ತಿಯಲ್ಲಿರುವ ತೈಲ ಮತ್ತು ಗ್ಯಾಸ್ ಘಟಕಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಕೂಡಲೇ ಜಾಗ ಖಾಲಿ ಮಾಡಬೇಕು ಎಂದು ಇರಾನ್ ಸೂಚಿಸಿತ್ತು. ಇದರ ಬೆನ್ನಲ್ಲೇ ಈಗ ಭೀಕರ ದಾಳಿ ನಡೆದಿದೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…