ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ ಸಂಸ್ಕರಣಾ ಕೇಂದ್ರಗಳನ್ನೇ ಗುರಿಯಾಗಿಸಿಕೊಂಡು ಇರಾನ್ ಭೀಕರ ಡ್ರೋನ್ ದಾಳಿ ನಡೆಸಿದೆ.
ದಿನಕ್ಕೆ ಸುಮಾರು 730,000 ಬ್ಯಾರೆಲ್ ತೈಲವನ್ನು ಸಂಸ್ಕರಿಸಬಲ್ಲ ಸಂಸ್ಕರಣಾಗಾರವು ಮತ್ತೊಂದು ಇರಾನಿನ ದಾಳಿಯಲ್ಲಿ ಹಾನಿಗೊಳಗಾಗಿದೆ. ಇದು ಪರ್ಷಿಯನ್ ಕೊಲ್ಲಿಯ ಸಣ್ಣ, ತೈಲ-ಸಮೃದ್ಧ ರಾಷ್ಟ್ರವಾದ ಕುವೈತ್ನಲ್ಲಿರುವ ಮೂರು ತೈಲ ಸಂಸ್ಕರಣಾಗಾರಗಳಲ್ಲಿ ಒಂದಾಗಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರುಪೇರಾಗುವ ಸಾಧ್ಯತೆ ಇದೆ.
ಇರಾನ್ ಈಗಾಗಲೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ, ಸೌದಿ ಅರೇಬಿಯಾವು ತನ್ನ ತೈಲ ರಫ್ತಿಗಾಗಿ ಯಾನ್ಬು ಮತ್ತು ಫುಜೈರಾ ಬಂದರುಗಳನ್ನೇ ಹೆಚ್ಚಾಗಿ ಅವಲಂಬಿಸಿತ್ತು. ಆದರೆ, ಇರಾನ್ ಈಗ ಈ ಪರ್ಯಾಯ ಮಾರ್ಗಗಳನ್ನೂ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ನಿರಂತರ ದಾಳಿಯ ಪರಿಣಾಮವಾಗಿ ಫುಜೈರಾ ಘಟಕದಲ್ಲಿ ಈಗಾಗಲೇ ತೈಲ ಉತ್ಪಾದನೆ ಮತ್ತು ಸಂಸ್ಕರಣಾ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ದಾಳಿಗೂ ಮುನ್ನವೇ ಇರಾನ್ ಕಠಿಣ ಎಚ್ಚರಿಕೆ ನೀಡಿತ್ತು. ಸೌದಿ ಅರೇಬಿಯಾ, ಕತಾರ್ ಮತ್ತು ಯುಎಇ ವ್ಯಾಪ್ತಿಯಲ್ಲಿರುವ ತೈಲ ಮತ್ತು ಗ್ಯಾಸ್ ಘಟಕಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಕೂಡಲೇ ಜಾಗ ಖಾಲಿ ಮಾಡಬೇಕು ಎಂದು ಇರಾನ್ ಸೂಚಿಸಿತ್ತು. ಇದರ ಬೆನ್ನಲ್ಲೇ ಈಗ ಭೀಕರ ದಾಳಿ ನಡೆದಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…