ದೇಶ- ವಿದೇಶ

ವಿವಾದಾತ್ಮಕ ಹೇಳಿಕೆ ನೀಡಿದ್ದ ನ್ಯಾ. ಶೇಖರ್‌ ಯಾದವ್‌ ಕೊಲಿಜಿಯಂ ಮುಂದೆ ಹಾಜರಾಗುವ ಸಾಧ್ಯತೆ

ಹೊಸದಿಲ್ಲಿ : ಅಲಹಾಬಾದ್‌ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ಅವರು ವಿಶ್ವ ಹಿಂದು ಪರಿಷತ್‌ (ವಿಎಚ್‌ಪಿ) ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ವಿವರಣೆ ನೀಡಲು ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮುಂದೆ ಹಾಜರಾಗುವ ಸಾಧ್ಯತೆಯಿದೆ.

ವಿಎಚ್‌ಪಿ ಕಾರ್ಯಕ್ರಮದಲ್ಲಿ ಶೇಖರ ಅವರು ನೀಡಿದ್ದ ಸುದ್ದಿಗಳನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್‌, ವಿವರಣೆ ನೀಡುವಂತೆ ಇತ್ತೀಚೆಗೆ ಸೂಚಿಸಿತ್ತು.

ನ್ಯಾಯಮೂರ್ತಿಗಳಿಂದ ಯಾವುದೇ ವಿವಾದಾತ್ಮಕ ಹೇಳಿಕೆಗಳು ಬಂದ ವೇಳೆ ಆ ಕುರಿತು ಕೊಲಿಜಿಯಂ ವಿವರಣೆ ಕೇಳುತ್ತದೆ. ಮತ್ತೆ ಹೇಳಿಕೆ ಕುರಿತು ವಿವರಣೆ ನೀಡಲು ಅವಕಾಶ ನೀಡುತ್ತದೆ.

ಆ ನಿಟ್ಟಿನಲ್ಲಿ ಅಲಹಾಬಾದ್‌ ಹೈಕೋರ್ಟ್ ನ ನ್ಯಾಯಮೂರ್ತಿ ಸಹ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡುವ ಸಾಧ್ಯತೆಗಳಿವೆ ಎಂದು ಸುಪ್ರೀಂ ಕೋರ್ಟ್‌ನ ಮೂಲಗಳು ತಿಳಿಸಿವೆ.

ಡಿ.8 ನಡೆದ ವಿಎಚ್‌ಪಿ ಕಾನೂನು ವಿಭಾಗದ ಪ್ರಾಂತೀಯ ಸಮಾರಂಭದಲ್ಲಿ ಏಕರೂಪ ನಾಗರೀಕ ಸಂಹಿತೆ ಅಗತ್ಯತೆ, ಧರ್ಮನಿರಪೇಕ್ಷತೆಯ ಬಗ್ಗೆ ಪ್ರತಿಪಾದಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

15 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

15 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

15 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

16 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

16 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

16 hours ago